Important

ಅಂಕೋಲಾ ಕರಾವಳಿ ಉತ್ಸವ 2025 : ನವೆಂಬರ್ 5 ರಿಂದ 10ರ ವರೆಗೆ ಸಾಂಸ್ಕೃತಿಕ ವೈಭವ

Share
  • ಆರು ದಿನಗಳ ಸಾಂಸ್ಕೃತಿಕ ಹಬ್ಬಕ್ಕೆ ಅಂಕೋಲಾ ಸಜ್ಜು
  • ಜಸ್ ಕರಣ್ ಸಿಂಗ್, ಆಶಾ ಭಟ್ ಸೇರಿದಂತೆ ಗಣ್ಯ ಕಲಾವಿದರ ಝಲಕ್!

ಅಂಕೋಲಾ: ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಂದಿರುವ ಅಂಕೋಲಾ ತಾಲೂಕಿನಲ್ಲಿ ಅಂಕೋಲಾ ಸಾಂಸ್ಕೃತಿಕ ಕಲಾಬಳಗ ಉತ್ತರ ಕನ್ನಡ ಸಂಘಟನೆಯ ವತಿಯಿಂದ ಮಾಜಿ ಶಾಸಕಿ ರೂಪಾಲಿ ನಾಯ್ಕ ಅವರ ಗೌರವಾಧ್ಯಕ್ಷತೆಯಲ್ಲಿ ಅಂಕೋಲಾ ಕರಾವಳಿ ಉತ್ಸವ 2025 ಕಾರ್ಯಕ್ರಮ ನವೆಂಬರ್ 5 ರಿಂದ ನವೆಂಬರ 10 ರ ವರೆಗೆ ಅದ್ಧೂರಿಯಾಗಿ ನಡೆಯಲಿದೆ ಎಂದು ಸಂಘಟನೆಯ ಪ್ರಮುಖ ಜಗದೀಶ ನಾಯಕ ಮೊಗಟಾ ಹೇಳಿದರು.

ಪಟ್ಟಣದ ಗುರುಪ್ರಸಾದ ಸಭಾಭವನದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅಂಕೋಲಾ ಪಟ್ಟಣದ ಜೈಹಿಂದ್ ಹೈಸ್ಕೂಲ್ ಮೈದಾನದಲ್ಲಿ ಆರು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ವಸ್ತು ಪ್ರದರ್ಶನ ಮತ್ತು ಮಾರಾಟ,ಆಕರ್ಷಕ ಮಳಿಗೆಗಳು,ಅಮ್ಯೂಸಮೆಂಟ್ ಪಾರ್ಕ್ ಮೊದಲಾದ ವೈಭವ ಕಾಣಸಿಗಲಿದೆ ಎಂದರು.

ರಾಜ್ಯ, ರಾಷ್ಟ್ರ ಮಟ್ಟದ ಪ್ರತಿಭೆಗಳ ಒಗ್ಗೂಡಿಕೆ

ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಕಲಾವಿದರ ಕಾರ್ಯಕ್ರಮಗಳ ಜೊತೆಗೆ ಸ್ಥಳೀಯ ಪ್ರತಿಭೆಗಳಿಗೂ ಹಾಗೂ ಜಿಲ್ಲಾ, ರಾಜ್ಯ , ರಾಷ್ಟ್ರಮಟ್ಟದ ಕೆಲ ಪ್ರತಿಭೆಗಳಿಗೂ ಉತ್ತಮ ವೇದಿಕೆ ದೊರಕಲಿದ್ದು ಶಾಲಾ ವಿದ್ಯಾರ್ಥಿಗಳಿಗೂ ಯಾವುದೇ ಪರೀಕ್ಷೆಗಳು ಇಲ್ಲದ ಅತ್ಯಂತ ಸೂಕ್ತ ಸಮಯದಲ್ಲಿ ಎಲ್ಲಾ ನಿಯಮಗಳ ಪಾಲನೆಯೊಂದಿಗೆ ಉತ್ಸವವನ್ನು ನಡೆಸಲಾಗುವುದು ಎಂದರು.

ಸಂಘಟಕ ಪ್ರಮುಖ ಸಂಜಯ ನಾಯ್ಕ ಭಾವಿಕೇರಿ ಮಾತನಾಡಿ ಉತ್ಸವಕ್ಕೆ ಸಂಬಂಧಿಸಿದಂತೆ ವಿವಿಧ ಸಮಿತಿಗಳನ್ನು ರಚಿಸಿ ತಾಲೂಕಿನ ಅನುಭವಿಗಳ ಸಲಹೆ ಸೂಚನೆ ಪಡೆದು ಉತ್ಸವವನ್ನು ಸಂಘಟಿಸಲಾಗುವುದು ತಾಲೂಕಿನ ಸಮಸ್ತ ಜನತೆ ಸಹಕಾರ ನೀಡಬೇಕು ಎಂದರು.

ಪ್ರಮುಖ ಕಲಾವಿದರು

ಸಂಘಟಕ ಪ್ರಮುಖರುಗಳಾದ ನಿಲೇಶ ನಾಯ್ಕ ಭಾವಿಕೇರಿ, ರಜತ್ ನಾಯ್ಕ ಕನಸಿಗದ್ದೆ, ಸುಭಾಷ ನಾಯ್ಕ ಹೊನ್ನೆಕೇರಿ, ಗ್ರಾಪಂ ಮಾಜಿ ಅಧ್ಯಕ್ಷ ಹಾರವಾಡದ ಮಂಜುನಾಥ ಟಾಕೇಕರ್, ಪುರಸಭೆ ಸದಸ್ಯರಾದ ವಿಶ್ವನಾಥ ನಾಯ್ಕ, ಶ್ರೀಧರ ನಾಯ್ಕ, ಮಂಗೇಶ ಆಗೇರ, ಯುವ ಪ್ರಮುಖರಾದ ವಿನಾಯಕ ನಾಯ್ಕ, ರಘುವೀರ, ಸಾರ್ಥಕ ಮತ್ತಿತರರು ಉಪಸ್ಥಿತರಿದ್ದರು. ನವೆಂಬರ್ 5 ರಂದು ಮೂರು ಮುತ್ತು ಕಲಾವಿದರಿಂದ ಹಾಸ್ಯ ಚಟಾಕಿ, 6ರಂದು ಜ್ಯೂನಿಯರ್ ಪುನೀತ್ ರಾಜ ರಸಮಂಜರಿ, 7ರಂದು ಮಂಗಳೂರು ತಂಡದಿಂದ ರಸಮಂಜರಿ, 8ರಂದು ಪ್ರಾಣೇಶ ತಂಡದಿಂದ ನಗೆ ಹಬ್ಬ , 9ರಂದು ಜೆಸ್ ಕರಣ ಸಿಂಗ್ ಹಾಗೂ ಆಶಾ ಭಟ್ ತಂಡದಿಂದ ರಸಮಂಜರಿ, 10 ರಂದು ಬಿಗ್ ಬಾಸ್ ಖ್ಯಾತಿಯ ಹನುಮಂತು ಮತ್ತು ಪ್ರಥ್ವಿ ಭಟ್ ತಂಡದಿಂದ ಕಾರ್ಯಕ್ರಮ,ಇವು ಇಷ್ಟೇ ಅಲ್ಲದೆ ಪ್ರತಿದಿನ ಸ್ಥಳೀಯ ಕಲಾವಿದರಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಸಂಘಟಕ ಪ್ರಮುಖರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಅಂಕೋಲಾ ಕರಾವಳಿ ಉತ್ಸವಕ್ಕೆ ಭರದ ಸಿದ್ಧತೆ ಆರಂಭವಾಗಿದ್ದು,ಜನತೆಯೂ ಈ ಕಾರ್ಯಕ್ರಮದತ್ತ ನಿರೀಕ್ಷೆ ಇಟ್ಟಂತಿದೆ.

  • ಉತ್ಸವ ದಿನಾಂಕ: ನವೆಂಬರ್ 5 ರಿಂದ 10 ರವರೆಗೆ — 6 ದಿನಗಳ ಸಾಂಸ್ಕೃತಿಕ ಸಡಗರ
  • ಸ್ಥಳ: ಜೈಹಿಂದ್ ಹೈಸ್ಕೂಲ್ ಮೈದಾನ, ಅಂಕೋಲಾ
  • ಗೌರವಾಧ್ಯಕ್ಷೆ: ಮಾಜಿ ಶಾಸಕಿ ರೂಪಾಲಿ ನಾಯ್ಕ
  • ಆಯೋಜಕರು: ಅಂಕೋಲಾ ಸಾಂಸ್ಕೃತಿಕ ಕಲಾಬಳಗ — ಉತ್ತರ ಕನ್ನಡ

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರುವ ಘಟನೆ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳು ವೈದ್ಯರು ಕಲೆ ಮತ್ತು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ...

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...