Important

ಅಂಕೋಲಾ ಕರಾವಳಿ ಉತ್ಸವ 2025 : ನವೆಂಬರ್ 5 ರಿಂದ 10ರ ವರೆಗೆ ಸಾಂಸ್ಕೃತಿಕ ವೈಭವ

Share
  • ಆರು ದಿನಗಳ ಸಾಂಸ್ಕೃತಿಕ ಹಬ್ಬಕ್ಕೆ ಅಂಕೋಲಾ ಸಜ್ಜು
  • ಜಸ್ ಕರಣ್ ಸಿಂಗ್, ಆಶಾ ಭಟ್ ಸೇರಿದಂತೆ ಗಣ್ಯ ಕಲಾವಿದರ ಝಲಕ್!

ಅಂಕೋಲಾ: ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಂದಿರುವ ಅಂಕೋಲಾ ತಾಲೂಕಿನಲ್ಲಿ ಅಂಕೋಲಾ ಸಾಂಸ್ಕೃತಿಕ ಕಲಾಬಳಗ ಉತ್ತರ ಕನ್ನಡ ಸಂಘಟನೆಯ ವತಿಯಿಂದ ಮಾಜಿ ಶಾಸಕಿ ರೂಪಾಲಿ ನಾಯ್ಕ ಅವರ ಗೌರವಾಧ್ಯಕ್ಷತೆಯಲ್ಲಿ ಅಂಕೋಲಾ ಕರಾವಳಿ ಉತ್ಸವ 2025 ಕಾರ್ಯಕ್ರಮ ನವೆಂಬರ್ 5 ರಿಂದ ನವೆಂಬರ 10 ರ ವರೆಗೆ ಅದ್ಧೂರಿಯಾಗಿ ನಡೆಯಲಿದೆ ಎಂದು ಸಂಘಟನೆಯ ಪ್ರಮುಖ ಜಗದೀಶ ನಾಯಕ ಮೊಗಟಾ ಹೇಳಿದರು.

ಪಟ್ಟಣದ ಗುರುಪ್ರಸಾದ ಸಭಾಭವನದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅಂಕೋಲಾ ಪಟ್ಟಣದ ಜೈಹಿಂದ್ ಹೈಸ್ಕೂಲ್ ಮೈದಾನದಲ್ಲಿ ಆರು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ವಸ್ತು ಪ್ರದರ್ಶನ ಮತ್ತು ಮಾರಾಟ,ಆಕರ್ಷಕ ಮಳಿಗೆಗಳು,ಅಮ್ಯೂಸಮೆಂಟ್ ಪಾರ್ಕ್ ಮೊದಲಾದ ವೈಭವ ಕಾಣಸಿಗಲಿದೆ ಎಂದರು.

ರಾಜ್ಯ, ರಾಷ್ಟ್ರ ಮಟ್ಟದ ಪ್ರತಿಭೆಗಳ ಒಗ್ಗೂಡಿಕೆ

ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಕಲಾವಿದರ ಕಾರ್ಯಕ್ರಮಗಳ ಜೊತೆಗೆ ಸ್ಥಳೀಯ ಪ್ರತಿಭೆಗಳಿಗೂ ಹಾಗೂ ಜಿಲ್ಲಾ, ರಾಜ್ಯ , ರಾಷ್ಟ್ರಮಟ್ಟದ ಕೆಲ ಪ್ರತಿಭೆಗಳಿಗೂ ಉತ್ತಮ ವೇದಿಕೆ ದೊರಕಲಿದ್ದು ಶಾಲಾ ವಿದ್ಯಾರ್ಥಿಗಳಿಗೂ ಯಾವುದೇ ಪರೀಕ್ಷೆಗಳು ಇಲ್ಲದ ಅತ್ಯಂತ ಸೂಕ್ತ ಸಮಯದಲ್ಲಿ ಎಲ್ಲಾ ನಿಯಮಗಳ ಪಾಲನೆಯೊಂದಿಗೆ ಉತ್ಸವವನ್ನು ನಡೆಸಲಾಗುವುದು ಎಂದರು.

ಸಂಘಟಕ ಪ್ರಮುಖ ಸಂಜಯ ನಾಯ್ಕ ಭಾವಿಕೇರಿ ಮಾತನಾಡಿ ಉತ್ಸವಕ್ಕೆ ಸಂಬಂಧಿಸಿದಂತೆ ವಿವಿಧ ಸಮಿತಿಗಳನ್ನು ರಚಿಸಿ ತಾಲೂಕಿನ ಅನುಭವಿಗಳ ಸಲಹೆ ಸೂಚನೆ ಪಡೆದು ಉತ್ಸವವನ್ನು ಸಂಘಟಿಸಲಾಗುವುದು ತಾಲೂಕಿನ ಸಮಸ್ತ ಜನತೆ ಸಹಕಾರ ನೀಡಬೇಕು ಎಂದರು.

ಪ್ರಮುಖ ಕಲಾವಿದರು

ಸಂಘಟಕ ಪ್ರಮುಖರುಗಳಾದ ನಿಲೇಶ ನಾಯ್ಕ ಭಾವಿಕೇರಿ, ರಜತ್ ನಾಯ್ಕ ಕನಸಿಗದ್ದೆ, ಸುಭಾಷ ನಾಯ್ಕ ಹೊನ್ನೆಕೇರಿ, ಗ್ರಾಪಂ ಮಾಜಿ ಅಧ್ಯಕ್ಷ ಹಾರವಾಡದ ಮಂಜುನಾಥ ಟಾಕೇಕರ್, ಪುರಸಭೆ ಸದಸ್ಯರಾದ ವಿಶ್ವನಾಥ ನಾಯ್ಕ, ಶ್ರೀಧರ ನಾಯ್ಕ, ಮಂಗೇಶ ಆಗೇರ, ಯುವ ಪ್ರಮುಖರಾದ ವಿನಾಯಕ ನಾಯ್ಕ, ರಘುವೀರ, ಸಾರ್ಥಕ ಮತ್ತಿತರರು ಉಪಸ್ಥಿತರಿದ್ದರು. ನವೆಂಬರ್ 5 ರಂದು ಮೂರು ಮುತ್ತು ಕಲಾವಿದರಿಂದ ಹಾಸ್ಯ ಚಟಾಕಿ, 6ರಂದು ಜ್ಯೂನಿಯರ್ ಪುನೀತ್ ರಾಜ ರಸಮಂಜರಿ, 7ರಂದು ಮಂಗಳೂರು ತಂಡದಿಂದ ರಸಮಂಜರಿ, 8ರಂದು ಪ್ರಾಣೇಶ ತಂಡದಿಂದ ನಗೆ ಹಬ್ಬ , 9ರಂದು ಜೆಸ್ ಕರಣ ಸಿಂಗ್ ಹಾಗೂ ಆಶಾ ಭಟ್ ತಂಡದಿಂದ ರಸಮಂಜರಿ, 10 ರಂದು ಬಿಗ್ ಬಾಸ್ ಖ್ಯಾತಿಯ ಹನುಮಂತು ಮತ್ತು ಪ್ರಥ್ವಿ ಭಟ್ ತಂಡದಿಂದ ಕಾರ್ಯಕ್ರಮ,ಇವು ಇಷ್ಟೇ ಅಲ್ಲದೆ ಪ್ರತಿದಿನ ಸ್ಥಳೀಯ ಕಲಾವಿದರಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಸಂಘಟಕ ಪ್ರಮುಖರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಅಂಕೋಲಾ ಕರಾವಳಿ ಉತ್ಸವಕ್ಕೆ ಭರದ ಸಿದ್ಧತೆ ಆರಂಭವಾಗಿದ್ದು,ಜನತೆಯೂ ಈ ಕಾರ್ಯಕ್ರಮದತ್ತ ನಿರೀಕ್ಷೆ ಇಟ್ಟಂತಿದೆ.

  • ಉತ್ಸವ ದಿನಾಂಕ: ನವೆಂಬರ್ 5 ರಿಂದ 10 ರವರೆಗೆ — 6 ದಿನಗಳ ಸಾಂಸ್ಕೃತಿಕ ಸಡಗರ
  • ಸ್ಥಳ: ಜೈಹಿಂದ್ ಹೈಸ್ಕೂಲ್ ಮೈದಾನ, ಅಂಕೋಲಾ
  • ಗೌರವಾಧ್ಯಕ್ಷೆ: ಮಾಜಿ ಶಾಸಕಿ ರೂಪಾಲಿ ನಾಯ್ಕ
  • ಆಯೋಜಕರು: ಅಂಕೋಲಾ ಸಾಂಸ್ಕೃತಿಕ ಕಲಾಬಳಗ — ಉತ್ತರ ಕನ್ನಡ

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಕಲಾಸಿರಿ ಪ್ರಶಸ್ತಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಬೆಳಗಲು ಸಾಧ್ಯ:ಪಿ. ಆರ್. ನಾಯ್ಕ

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಇತರರ ಬದುಕಿನಲ್ಲೂ ಸದಾ ಬೆಳಗಲು ಸಾಧ್ಯ ಎಂದು ಕಲಾಸಿರಿ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಪಿ....

ಆಂಬ್ಯುಲೆನ್ಸ್ ಡಿಕ್ಕಿ : ಭಟ್ಕಳದ ದಂಪತಿ ಬೆಂಗಳೂರಿನಲ್ಲಿ ದುರಂತ ಸಾವು

ಭಟ್ಕಳ: ವೇಗವಾಗಿ ಬಂದ ಆಂಬ್ಯುಲೆನ್ಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಟ್ಕಳ ಮೂಲದ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ತಡರಾತ್ರಿ ಶಾಂತಿನಗರದ ಕೆ. ಹೆಚ್. ರಸ್ತೆಯ ಸಂಗೀತಾ ಸಿಗ್ನಲ್...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...

ಆಂಬ್ಯುಲೆನ್ಸ್ ಡಿಕ್ಕಿ : ಭಟ್ಕಳದ ದಂಪತಿ ಬೆಂಗಳೂರಿನಲ್ಲಿ ದುರಂತ ಸಾವು

ಭಟ್ಕಳ: ವೇಗವಾಗಿ ಬಂದ ಆಂಬ್ಯುಲೆನ್ಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಟ್ಕಳ ಮೂಲದ ದಂಪತಿ...

ಪಲ್ಟಿಯಾದ ಬಸ್: 45 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಅಂಕೋಲಾ: ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಒಂದಾಗಿರುವ ಗೋಕರ್ಣ ವಡ್ದೀಘಾಟ ಹೆದ್ದಾರಿ ತಿರುವಿನಲ್ಲಿ ಸಾರಿಗೆ ಸಂಸ್ಥೆಯ ಬಸ್ಸೊಂದು...

KDCC ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ವಸಂತ ನಾಯಕ ಜಮಗೋಡ : ಈ ಬಾರಿ ಹೆಚ್ಚಿದ ಗೆಲುವಿನ ನಿರೀಕ್ಷೆ

ಅಂಕೋಲಾ : ಸಹಕಾರಿ ಮತ್ತು ಸಾಮಾಜಿಕ, ಧಾರ್ಮಿಕ ಮತ್ತಿತರ ಕ್ಷೇತ್ರಗಳಲ್ಲಿ ಸದಾ ಮಂಚೂಣಿಯಲ್ಲಿರುವ ನಾಯಕ ಎಂದು...

ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ ಬೃಹತ್ ಆಹಾರ ಮತ್ತು ಸ್ವದೇಶೀ ಮೇಳ: ಅಕ್ಟೋಬರ್ 7, 8,9 ರಂದು ಆಯೋಜನೆ

ಅಂಕೋಲಾ : ರಾಘವೇಂದ್ರ ಇವೆಂಟ್ಸ್ ಅಂಕೋಲಾ ಹಾಗೂ ಬೆನಕ ಇವೆಂಟ್ಸ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ...

ಸೇವಾಪರ್ವ ವಿಕಸಿತ ಭಾರತ ವಿಷಯಾಧಾರಿತ ಪೇಟಿಂಗ್ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದರ್ಶನ ನಾಯ್ಕ

ಭಟ್ಕಳ: ಕೇಂದ್ರ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ತಂಜಾವೂರು ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ವಿಕ್ಷಿತ್ ಭಾರತ್...

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ...