Important

KDCC ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ವಸಂತ ನಾಯಕ ಜಮಗೋಡ : ಈ ಬಾರಿ ಹೆಚ್ಚಿದ ಗೆಲುವಿನ ನಿರೀಕ್ಷೆ

Share
  • ಪ್ರಾಮಾಣಿಕ ಸೇವೆಯ ಪಥದಲ್ಲಿ ವಸಂತ ನಾಯಕ
  • ಸಹಕಾರದ ಬೆಳಕಿನಲ್ಲಿ ನಂಬಿಕೆಯ ನಾಯಕ

ಅಂಕೋಲಾ : ಸಹಕಾರಿ ಮತ್ತು ಸಾಮಾಜಿಕ, ಧಾರ್ಮಿಕ ಮತ್ತಿತರ ಕ್ಷೇತ್ರಗಳಲ್ಲಿ ಸದಾ ಮಂಚೂಣಿಯಲ್ಲಿರುವ ನಾಯಕ ಎಂದು ಗುರುತಿಸಿಕೊಂಡಿರುವ, ತಾಲೂಕಿನ ಶ್ರೀರಾಮ ಪರಿಸರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ವಸಂತ ನಾಯಕ ಜಮಗೋಡ ಅವರು ಜಿಲ್ಲೆಯ ಪ್ರತಿಷ್ಠಿತ ಮದ್ಯವರ್ತಿ ಬ್ಯಾಂಕ್ ಮಿಸಿರುವ ಕೆಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಕ್ಕೆ ತಮ್ಮ ನಾಮಪತ್ರ ಸಲ್ಲಿಸಿದ್ದು, ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಅಭಿಮಾನಿಗಳ ಮತ್ತು ಪ್ರಜ್ಞಾವಂತ ಸಹಕಾರಿಗಳ ಒತ್ತಾಯದ ಮೇರೆಗೆ ಸ್ಪರ್ಧೆ

ಕಳೆದ ಬಾರಿಯೇ ವಸಂತ ನಾಯಕರಂಥ ವ್ಯಕ್ತಿ ಕೆಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾಗಬೇಕಿತ್ತು ಎನ್ನುವ ಅಭಿಪ್ರಾಯ ಹಲವರಲ್ಲಿತ್ತಾದರೂ, ಅಂದಿನ ಚುನಾವಣೆಯ ಕೊನೆ ಸಂದರ್ಭದಲ್ಲಿ , ತೆರೆಯ ಹಿಂದೆ ಕೆಲವರು ನಡೆಸಿದ ಕೆಲ ಅನಿರೀಕ್ಷಿತ ಬೆಳವಣಿಗೆ ವಸಂತ ನಾಯಕರ ಗೆಲುವಿನ ಗುರಿಗೆ ತೊಡಕಾಗಿ, ಕೆಲವೇ ಮತಗಳ ಅಂತರದಿಂದ ಪರಾಭವಗೊಳ್ಳುವಂತಾಗಿತ್ತು ಎಂಬ ಅಭಿಪ್ರಾಯ ಕೇಳಿಬಂದಿದ್ದು, ಈ ಭಾರಿಯಾದರೂ ಅವರನ್ನು ಗೆಲ್ಲಿಸಲೇಬೇಕೆಂಬ ಪಣತೊಟ್ಟಂತಿದೆ ಅವರ ಅಭಿಮಾನಿಗಳು ಮತ್ತು ಸಹಕಾರಿ ಕ್ಷೇತ್ರದ ಪ್ರಜ್ಞಾವಂತ ಮತದಾರ ಬಂಧುಗಳು, ಹೀಗಾಗಿಯೇ ವಸಂತ ನಾಯಕ ಅವರನ್ನು ಈ ವರ್ಷವೂ ಸ್ಪರ್ಧಿಸುವಂತೆ ಒತ್ತಡ ಹೇರಿದ ಅಭಿಮಾನಿಗಳು ಹಾಗೂ ಸಹಕಾರಿ ಕ್ಷೇತ್ರದ ಸಮಸ್ಯೆಯನ್ನು ಅರಿತ ಜಿಲ್ಲೆಯ ಹಲವು ಅರ್ಬನ ಬ್ಯಾಂಕ್‌ಗಳು ಮತ್ತು ಸೌಹಾರ್ದ ಸಹಕಾರಿಗಳು ವಿನಂತಿ ಕೋರಿಕೆಗೆ ವಸಂತ ನಾಯಕ ಅವರು ಅವರಲ್ಲರ ಪ್ರೀತಿಗೆ ತಲೆಬಾಗಿ ಕೊನೆಗೊ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.

ಸಹಕಾರಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳ ನಂಬಿಕೆಯ ನಾಯಕ

ಈಗಾಗಲೇ ಜಿಲ್ಲೆಯ ಎಲ್ಲಾ ತಾಲೂಕುಗಳ, ಹಳ್ಳಿ ಹಳ್ಳಿ ಸೇರಿದಂತೆ ಇತರೆಡೆ ಮತಯಾಚನೆ ಮಾಡಿ, ಅವರೆಲ್ಲರ ಅಶೀರ್ವಾದ ಬಯಸಿ ಮುನ್ನಡೆಯುತ್ತಿದ್ದಾರೆ. ಸಹಕಾರಿ ಕ್ಷೇತ್ರವೇ ಇರಲಿ , ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಕ್ರೀಡೆ ಮತ್ತಿತರ ಕ್ಷೇತ್ರಗಳ ಬೆಳವಣಿಗೆಗೆ ಪ್ರೋತ್ಸಾಹಕರಾಗಿರುವ ವಸಂತ ನಾಯಕ ಇವರ ಸೇವೆ ಮತ್ತು ಸಹಾಯ ಸಹಕಾರದ ಮನೋಭಾವನೆಗೆಗಳು ಅವರನ್ನು ಜಿಲ್ಲೆಯ ಶ್ರೇಷ್ಠ ಸಹಕಾರಿಗಳ ಸಾಲಿನಲ್ಲಿ ಗುರುತಿಸುವಂತಾಗಿದೆ.

ಅಭಿಮಾನಿಗಳ ಒತ್ತಾಯದ ಮೇರೆಗೆ ಈ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದು, ಜಿಲ್ಲೆಯ ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾಗುವ ಮೂಲಕ ಜಿಲ್ಲೆಯ ಕೃಷಿಕರಿಗೆ ಹಾಗೂ ಇತರರೆಲ್ಲರಿಗೂ ಬ್ಯಾಂಕಿಂಗ್ ಆಶಯಕ್ಕೆ ಅನುಗುಣವಾಗಿ ಪ್ರಾಮಾಣಿಕ ಸೇವೆ ಸಲ್ಲಿಸುವ ಇಚ್ಚೆ ಹೊಂದಿರುವ ವಸಂತ ನಾಯಕ ಗೆದ್ದು ಬರಲಿ ಎನ್ನುವುದು ಅವರ ಆಪ್ತರ ಹಿತೈಷಿಗಳ ಆಶಯವಾಗಿದೆ.

ಶಿರಸಿಯಲ್ಲಿ ಶಿರಸಿಯಲ್ಲಿ ವಸಂತ ನಾಯಕ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಬಶೆಟ್ಟಿ ಕಾರವಾರ, ರಾಜೇಂದ್ರ ರಾಣೆ ಕಾರವಾರ, ಜಿ.ಪಿ.ನಾಯಕ, ರಾಮಕೃಷ್ಣ ನಾಯಕ, ಚಂದ್ರಹಾಸ ನಾಯಕ, ಪ್ರಕಾಶ ನಾಯಕ, ರಾಮಚಂದ್ರ ನಾಯಕ, ವೆಂಕಟೇಶ, ಎಂ.ಪಿ.ನಾಯಕ, ಪಿ.ಎಸ್.ನಾಯಕ, ವಿನಾಯಕ ನಾಯಕ ಕುಮಟಾ, ರಾಜೇಂದ್ರ ನಾಡರ, ಅನೂಪ, ವಿಶಾಲ, ಗಣೇಶ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು.

ಸಹಕಾರದಿಂದ ಸಮೃದ್ಧ ಜಿಲ್ಲೆಯ ಕನಸಿನತ್ತ ವಸಂತ ನಾಯಕ

ನಾನು ನಮ್ಮ ಜಿಲ್ಲೆಯ ಹಲವು ಸಹಕಾರಿಗಳ ಹಾಗೂ ಅಭಿಮಾನಿಗಳ ಒತ್ತಾಯದ ಮೇರೆಗೆ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಈಗಾಗಲೇ ಎಲ್ಲಾ ತಾಲೂಕಿನಲ್ಲಿ ಮತಯಾಚನೆ ಮಾಡಿದ್ದು, ಅವರೆಲ್ಲರ ಪ್ರೀತಿ ವಿಶ್ವಾಸದ ಬೆಂಬಲ ದೊರೆಯುತ್ತಿದೆ. ಕಳೆದ ಚುನಾವಣೆಯಲ್ಲಿ ನನಗೆ ಒಂದರ್ಭದಲ್ಲಿ ಆದ ಅನ್ಯಾಯಕ್ಕೆ ಹಲವರು ಬೇಸರ ವ್ಯಕ್ತಪಡಿಸಿದ್ದು, ಈ ಬಾರಿ ಸಹಕರಿಸುವುದಾಗಿ ತಿಳಿಸಿರುವುದರಿಂದ ನನಗೆ ಗೆಲುವಿನ ಬಗ್ಗೆ ಮತ್ತಷ್ಟು ಆತ್ಮವಿಶ್ವಾಸ ಹೆಚ್ಚಿದೆ. ಸರ್ವರ ಸಹಕಾರದಲ್ಲಿ ನಾನು ಗೆದ್ದು ಬಂದು ಜಿಲ್ಲೆಯ ಸಹಕಾರಿ ಕ್ಷೇತ್ರವನ್ನು ಮತ್ತಷ್ಟು ಪ್ರಭಲಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುವೆ.

ಒಟ್ಟಿನಲ್ಲಿ ಈ ಬಾರಿಯ ಕೆಡಿಸಿಸಿ ಬ್ಯಾಂಕಿನ ತುರುಸಿನ ಸ್ಪರ್ಧೆಯಲ್ಲಿ ಪ್ರಬಲ ಸ್ಪರ್ಧಿಯಾಗಿರುವ ವಸಂತ ನಾಯಕ, ಗೆದ್ದು ಹೊಸ ಬೆಳಕು ಮೂಡಿಸಲಿ ಎನ್ನುವುದು ದೀಪಾವಳಿಯ ಶುಭ ಸಂದರ್ಭದಲ್ಲಿ ಹಲವರ ಆಶಯವಾಗಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಅಲಂಕಾರ ಜ್ಯುವೆಲ್ಲರ್ಸ್ : ಅಕ್ಷಯ ತೃತೀಯ ವಿಶೇಷ ಆಫರ್

ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ : ಈ ಶುಭ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನ ಮತ್ತು ಬೆಳ್ಳಿ ಖರೀದಿ ಮೇಲೆ ಭರ್ಜರಿ ಆಫರ್‌ಗಳು ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ಅಂಕೋಲಾದ ಪ್ರಸಿದ್ಧ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ ಗುರುವಾರ, 10ರ ಶುಕ್ರವಾರ ಶ್ರೀಕ್ಷೇತ್ರ ಗೋಕರ್ಣಕ್ಕೆ ಆಗಮಿಸಲಿದೆ. ಏಪ್ರಿಲ್ 9 ರಂದು ರಥಬೀದಿಯಲ್ಲಿರುವ ರಾಮಚಂದ್ರ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ...

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...

ನರ್ಸ್ ವೃತ್ತಿ ಮತ್ತು ಕುಟುಂಬ ಜವಾಬ್ದಾರಿಗಳ ನಡುವೆಯೇ ಸಾಧನೆ ಮಾಡಿದ ಪೂಜಾ ನಾಯ್ಕ

ಕುಮಟಾ :- ತಾಲೂಕಿನ ಕಲಭಾಗ ಗ್ರಾಮ ನಿವಾಸಿ ಪೂಜಾ ಸಂತೋಷ ನಾಯ್ಕ ಅವರು 2024–26ನೇ ಸಾಲಿನ...