Important

KDCC ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ವಸಂತ ನಾಯಕ ಜಮಗೋಡ : ಈ ಬಾರಿ ಹೆಚ್ಚಿದ ಗೆಲುವಿನ ನಿರೀಕ್ಷೆ

Share
  • ಪ್ರಾಮಾಣಿಕ ಸೇವೆಯ ಪಥದಲ್ಲಿ ವಸಂತ ನಾಯಕ
  • ಸಹಕಾರದ ಬೆಳಕಿನಲ್ಲಿ ನಂಬಿಕೆಯ ನಾಯಕ

ಅಂಕೋಲಾ : ಸಹಕಾರಿ ಮತ್ತು ಸಾಮಾಜಿಕ, ಧಾರ್ಮಿಕ ಮತ್ತಿತರ ಕ್ಷೇತ್ರಗಳಲ್ಲಿ ಸದಾ ಮಂಚೂಣಿಯಲ್ಲಿರುವ ನಾಯಕ ಎಂದು ಗುರುತಿಸಿಕೊಂಡಿರುವ, ತಾಲೂಕಿನ ಶ್ರೀರಾಮ ಪರಿಸರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ವಸಂತ ನಾಯಕ ಜಮಗೋಡ ಅವರು ಜಿಲ್ಲೆಯ ಪ್ರತಿಷ್ಠಿತ ಮದ್ಯವರ್ತಿ ಬ್ಯಾಂಕ್ ಮಿಸಿರುವ ಕೆಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಕ್ಕೆ ತಮ್ಮ ನಾಮಪತ್ರ ಸಲ್ಲಿಸಿದ್ದು, ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಅಭಿಮಾನಿಗಳ ಮತ್ತು ಪ್ರಜ್ಞಾವಂತ ಸಹಕಾರಿಗಳ ಒತ್ತಾಯದ ಮೇರೆಗೆ ಸ್ಪರ್ಧೆ

ಕಳೆದ ಬಾರಿಯೇ ವಸಂತ ನಾಯಕರಂಥ ವ್ಯಕ್ತಿ ಕೆಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾಗಬೇಕಿತ್ತು ಎನ್ನುವ ಅಭಿಪ್ರಾಯ ಹಲವರಲ್ಲಿತ್ತಾದರೂ, ಅಂದಿನ ಚುನಾವಣೆಯ ಕೊನೆ ಸಂದರ್ಭದಲ್ಲಿ , ತೆರೆಯ ಹಿಂದೆ ಕೆಲವರು ನಡೆಸಿದ ಕೆಲ ಅನಿರೀಕ್ಷಿತ ಬೆಳವಣಿಗೆ ವಸಂತ ನಾಯಕರ ಗೆಲುವಿನ ಗುರಿಗೆ ತೊಡಕಾಗಿ, ಕೆಲವೇ ಮತಗಳ ಅಂತರದಿಂದ ಪರಾಭವಗೊಳ್ಳುವಂತಾಗಿತ್ತು ಎಂಬ ಅಭಿಪ್ರಾಯ ಕೇಳಿಬಂದಿದ್ದು, ಈ ಭಾರಿಯಾದರೂ ಅವರನ್ನು ಗೆಲ್ಲಿಸಲೇಬೇಕೆಂಬ ಪಣತೊಟ್ಟಂತಿದೆ ಅವರ ಅಭಿಮಾನಿಗಳು ಮತ್ತು ಸಹಕಾರಿ ಕ್ಷೇತ್ರದ ಪ್ರಜ್ಞಾವಂತ ಮತದಾರ ಬಂಧುಗಳು, ಹೀಗಾಗಿಯೇ ವಸಂತ ನಾಯಕ ಅವರನ್ನು ಈ ವರ್ಷವೂ ಸ್ಪರ್ಧಿಸುವಂತೆ ಒತ್ತಡ ಹೇರಿದ ಅಭಿಮಾನಿಗಳು ಹಾಗೂ ಸಹಕಾರಿ ಕ್ಷೇತ್ರದ ಸಮಸ್ಯೆಯನ್ನು ಅರಿತ ಜಿಲ್ಲೆಯ ಹಲವು ಅರ್ಬನ ಬ್ಯಾಂಕ್‌ಗಳು ಮತ್ತು ಸೌಹಾರ್ದ ಸಹಕಾರಿಗಳು ವಿನಂತಿ ಕೋರಿಕೆಗೆ ವಸಂತ ನಾಯಕ ಅವರು ಅವರಲ್ಲರ ಪ್ರೀತಿಗೆ ತಲೆಬಾಗಿ ಕೊನೆಗೊ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.

ಸಹಕಾರಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳ ನಂಬಿಕೆಯ ನಾಯಕ

ಈಗಾಗಲೇ ಜಿಲ್ಲೆಯ ಎಲ್ಲಾ ತಾಲೂಕುಗಳ, ಹಳ್ಳಿ ಹಳ್ಳಿ ಸೇರಿದಂತೆ ಇತರೆಡೆ ಮತಯಾಚನೆ ಮಾಡಿ, ಅವರೆಲ್ಲರ ಅಶೀರ್ವಾದ ಬಯಸಿ ಮುನ್ನಡೆಯುತ್ತಿದ್ದಾರೆ. ಸಹಕಾರಿ ಕ್ಷೇತ್ರವೇ ಇರಲಿ , ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಕ್ರೀಡೆ ಮತ್ತಿತರ ಕ್ಷೇತ್ರಗಳ ಬೆಳವಣಿಗೆಗೆ ಪ್ರೋತ್ಸಾಹಕರಾಗಿರುವ ವಸಂತ ನಾಯಕ ಇವರ ಸೇವೆ ಮತ್ತು ಸಹಾಯ ಸಹಕಾರದ ಮನೋಭಾವನೆಗೆಗಳು ಅವರನ್ನು ಜಿಲ್ಲೆಯ ಶ್ರೇಷ್ಠ ಸಹಕಾರಿಗಳ ಸಾಲಿನಲ್ಲಿ ಗುರುತಿಸುವಂತಾಗಿದೆ.

ಅಭಿಮಾನಿಗಳ ಒತ್ತಾಯದ ಮೇರೆಗೆ ಈ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದು, ಜಿಲ್ಲೆಯ ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾಗುವ ಮೂಲಕ ಜಿಲ್ಲೆಯ ಕೃಷಿಕರಿಗೆ ಹಾಗೂ ಇತರರೆಲ್ಲರಿಗೂ ಬ್ಯಾಂಕಿಂಗ್ ಆಶಯಕ್ಕೆ ಅನುಗುಣವಾಗಿ ಪ್ರಾಮಾಣಿಕ ಸೇವೆ ಸಲ್ಲಿಸುವ ಇಚ್ಚೆ ಹೊಂದಿರುವ ವಸಂತ ನಾಯಕ ಗೆದ್ದು ಬರಲಿ ಎನ್ನುವುದು ಅವರ ಆಪ್ತರ ಹಿತೈಷಿಗಳ ಆಶಯವಾಗಿದೆ.

ಶಿರಸಿಯಲ್ಲಿ ಶಿರಸಿಯಲ್ಲಿ ವಸಂತ ನಾಯಕ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಬಶೆಟ್ಟಿ ಕಾರವಾರ, ರಾಜೇಂದ್ರ ರಾಣೆ ಕಾರವಾರ, ಜಿ.ಪಿ.ನಾಯಕ, ರಾಮಕೃಷ್ಣ ನಾಯಕ, ಚಂದ್ರಹಾಸ ನಾಯಕ, ಪ್ರಕಾಶ ನಾಯಕ, ರಾಮಚಂದ್ರ ನಾಯಕ, ವೆಂಕಟೇಶ, ಎಂ.ಪಿ.ನಾಯಕ, ಪಿ.ಎಸ್.ನಾಯಕ, ವಿನಾಯಕ ನಾಯಕ ಕುಮಟಾ, ರಾಜೇಂದ್ರ ನಾಡರ, ಅನೂಪ, ವಿಶಾಲ, ಗಣೇಶ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು.

ಸಹಕಾರದಿಂದ ಸಮೃದ್ಧ ಜಿಲ್ಲೆಯ ಕನಸಿನತ್ತ ವಸಂತ ನಾಯಕ

ನಾನು ನಮ್ಮ ಜಿಲ್ಲೆಯ ಹಲವು ಸಹಕಾರಿಗಳ ಹಾಗೂ ಅಭಿಮಾನಿಗಳ ಒತ್ತಾಯದ ಮೇರೆಗೆ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಈಗಾಗಲೇ ಎಲ್ಲಾ ತಾಲೂಕಿನಲ್ಲಿ ಮತಯಾಚನೆ ಮಾಡಿದ್ದು, ಅವರೆಲ್ಲರ ಪ್ರೀತಿ ವಿಶ್ವಾಸದ ಬೆಂಬಲ ದೊರೆಯುತ್ತಿದೆ. ಕಳೆದ ಚುನಾವಣೆಯಲ್ಲಿ ನನಗೆ ಒಂದರ್ಭದಲ್ಲಿ ಆದ ಅನ್ಯಾಯಕ್ಕೆ ಹಲವರು ಬೇಸರ ವ್ಯಕ್ತಪಡಿಸಿದ್ದು, ಈ ಬಾರಿ ಸಹಕರಿಸುವುದಾಗಿ ತಿಳಿಸಿರುವುದರಿಂದ ನನಗೆ ಗೆಲುವಿನ ಬಗ್ಗೆ ಮತ್ತಷ್ಟು ಆತ್ಮವಿಶ್ವಾಸ ಹೆಚ್ಚಿದೆ. ಸರ್ವರ ಸಹಕಾರದಲ್ಲಿ ನಾನು ಗೆದ್ದು ಬಂದು ಜಿಲ್ಲೆಯ ಸಹಕಾರಿ ಕ್ಷೇತ್ರವನ್ನು ಮತ್ತಷ್ಟು ಪ್ರಭಲಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುವೆ.

ಒಟ್ಟಿನಲ್ಲಿ ಈ ಬಾರಿಯ ಕೆಡಿಸಿಸಿ ಬ್ಯಾಂಕಿನ ತುರುಸಿನ ಸ್ಪರ್ಧೆಯಲ್ಲಿ ಪ್ರಬಲ ಸ್ಪರ್ಧಿಯಾಗಿರುವ ವಸಂತ ನಾಯಕ, ಗೆದ್ದು ಹೊಸ ಬೆಳಕು ಮೂಡಿಸಲಿ ಎನ್ನುವುದು ದೀಪಾವಳಿಯ ಶುಭ ಸಂದರ್ಭದಲ್ಲಿ ಹಲವರ ಆಶಯವಾಗಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸೇವಾಪರ್ವ ವಿಕಸಿತ ಭಾರತ ವಿಷಯಾಧಾರಿತ ಪೇಟಿಂಗ್ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದರ್ಶನ ನಾಯ್ಕ

ಭಟ್ಕಳ: ಕೇಂದ್ರ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ತಂಜಾವೂರು ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ವಿಕ್ಷಿತ್ ಭಾರತ್ ಕೇ ರಂಗ್ ಕಲಾ ಸಂಗ್ ಅಡಿಬರಹದಡಿ ಹಮ್ಮಿಕೊಂಡ ಸೇವಾ ಪರ್ವ ವಿಕಸಿತ ಭಾರತದ ಕಲ್ಪನೆ...

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ ತರಬಹುದು,ಇಂತಹದೊoದು ಪ್ರಕೃತಿ ವಿಸ್ಮಯ ನಡೆದದ್ದು ದೂರದಲ್ಲೆಲ್ಲೋ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಅಂಕೋಲಾ ಕರಾವಳಿ ಉತ್ಸವ 2025 : ನವೆಂಬರ್ 5 ರಿಂದ 10ರ ವರೆಗೆ ಸಾಂಸ್ಕೃತಿಕ ವೈಭವ

ಅಂಕೋಲಾ: ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಂದಿರುವ ಅಂಕೋಲಾ ತಾಲೂಕಿನಲ್ಲಿ ಅಂಕೋಲಾ ಸಾಂಸ್ಕೃತಿಕ ಕಲಾಬಳಗ ಉತ್ತರ ಕನ್ನಡ ಸಂಘಟನೆಯ...

ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ ಬೃಹತ್ ಆಹಾರ ಮತ್ತು ಸ್ವದೇಶೀ ಮೇಳ: ಅಕ್ಟೋಬರ್ 7, 8,9 ರಂದು ಆಯೋಜನೆ

ಅಂಕೋಲಾ : ರಾಘವೇಂದ್ರ ಇವೆಂಟ್ಸ್ ಅಂಕೋಲಾ ಹಾಗೂ ಬೆನಕ ಇವೆಂಟ್ಸ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ...

ಸೇವಾಪರ್ವ ವಿಕಸಿತ ಭಾರತ ವಿಷಯಾಧಾರಿತ ಪೇಟಿಂಗ್ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದರ್ಶನ ನಾಯ್ಕ

ಭಟ್ಕಳ: ಕೇಂದ್ರ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ತಂಜಾವೂರು ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ವಿಕ್ಷಿತ್ ಭಾರತ್...

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ...

ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಹೊನ್ನಾವರ ಇದರ ವಾರ್ಷಿಕ ಸರ್ವ ಸಾಧಾರಣ

ಹೊನ್ನಾವರ : ಇಲ್ಲಿನ ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ...

ಮಾನವೀಯತೆಯ ದೀಪ ಬೆಳಗಿಸಿದ ನೇತ್ರದಾನಿ ಕೃಷ್ಣ ನಾಯ್ಕ ಅಮರ

ಕುಮಟಾ : ತಾಲೂಕಿನ ಧಾರೇಶ್ವರ ಹೋಬಳಿ ಹರನೀರು ತುದಿಮನೆ ನಿವಾಸಿ ಕೃಷ್ಣ ನಾರಾಯಣ ನಾಯ್ಕ (77...

ಬಸ್ ಗೆ ಡಿಕ್ಕಿ ಹೊಡೆದ ಲಾರಿ : ಸ್ಟೇರಿಂಗ್ ಮಧ್ಯ ಸಿಲುಕಿದ ಲಾರಿ ಚಾಲಕ ಸಾವು: ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲಿಯೇ ನಿಧನ

ಅಂಕೋಲಾ: ಟ್ಯಾಂಕರ್ ಲಾರಿ ಮತ್ತು ಸಾರಿಗೆ ಸಂಸ್ಥೆಯ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಹೃದಯದಾಕಾರದ ಮುಖದ ಗೂಬೆ: ಶಾಲೆಗೆ ಬಂತು ಗುಮ್ಮ

ಅಂಕೋಲಾ: ಮಕ್ಕಳು ಊಟ, ತಿಂಡಿ, ನಿದ್ದೆ ಸರಿಯಾಗಿ ಮಾಡದಿದ್ದರೆ ಅಥವಾ ಬೇರೆ ಕಾರಣದಿಂದ ಹಠ ಹಿಡಿದರೆ...