Important

ಪಲ್ಟಿಯಾದ ಬಸ್: 45 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Share

ಅಂಕೋಲಾ: ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಒಂದಾಗಿರುವ ಗೋಕರ್ಣ ವಡ್ದೀಘಾಟ ಹೆದ್ದಾರಿ ತಿರುವಿನಲ್ಲಿ ಸಾರಿಗೆ ಸಂಸ್ಥೆಯ ಬಸ್ಸೊಂದು ಅದಾವುದೋ ಕಾರಣದಿಂದ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆಯುತ್ತಾ ತಗ್ಗು ಪ್ರದೇಶದಲ್ಲಿ ಉರುಳಿದ ಘಟನೆ ಶನಿವಾರ ಸಂಭವಿಸಿದೆ.

ಶಿರಸಿ ಕಡೆಯಿಂದ ಕುಮಟಾ ಕಡೆ ಹೋಗುತ್ತಿದ್ದ ಕೆ.ಎ 31/ ಎಫ್ 1630 ನೊಂದಣಿ ಸಂಖ್ಯೆಯ ಬಸ್ ಇದಾಗಿದ್ದು, ಅಂಕೋಲಾ ತಾಲೂಕಿನ ಅಚವೆ ಗ್ರಾಮ ವ್ಯಾಪ್ತಿಯ ವಡ್ಡೀಘಾಟ್ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ಈ ರಸ್ತೆ ಅವಘಡದಿಂದ ಬಸ್ಸಿನಲ್ಲಿದ್ದ 45 ಕ್ಕೂ ಹೆಚ್ಚು ಪ್ರಯಾಣಿಕರಲ್ಲಿ ಹಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಹಲವು ಗಾಯಾಳುಗಳನ್ನು ಅಂಕೋಲಾ ಮತ್ತು ಕುಮಟಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು ಅದೃಷ್ಟವಶಾತ್ ಚಾಲಕ -ನಿರ್ವಾಹಕ , ಮತ್ತು ಪ್ರಯಾಣಿಕರೆಲ್ಲರೂ ಸಂಭವನೀಯ ಭಾರೀ ಅಪಾಯ ಮತ್ತು ಅನಾಹುತದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಕುಮಟಾ ಘಟಕಕ್ಕೆ ಸೇರಿದ ಈ ಬಸ್ಸು, ಬಳ್ಳಾರಿಯಿಂದ ಶಿರಸಿ ಮಾರ್ಗವಾಗಿ ವಡ್ಡೀಘಾಟ ಬಳಿ ಸಂಚರಿಸುತ್ತಿರುವಾಗ ಆಕಸ್ಮಿಕ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಸಾರಿಗೆ ಸಂಸ್ಥೆಯ ಅಧಿಕಾರಿಗಳು , ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಅಪಘಾತದ ಘಟನೆ ಕುರಿತಂತೆ ಮತ್ತಷ್ಟು ಹೆಚ್ಚಿನ ಹಾಗೂ ಅಧಿಕೃತ ಮಾಹಿತಿ ತಿಳಿದು ಬರಬೇಕಿದೆ.

ಬಸ್ ಚಾಲಕನ ಅತಿ ವೇಗ ಹಾಗೂ ನಿರ್ಲಕ್ಷ್ಯತನದ ಚಾಲನೆಯಿಂದಲೇ ಈ ಅಪಘಾತ ಸಂಭವಿಸಿದ್ದು ಆತನ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಏರ್ಪೋರ್ಟ್ ಮೆನೇಜರ್ ವೃತ್ತಿಯ , ಹೊನ್ನಾವರ ಅರೆ ಯಂಗಡಿ – ನೀಲಕೋಡ ನಿವಾಸಿ ದೀಪಕ ಉಲ್ಲಾಸ್ ಕಾಮತ್ ಎನ್ನುವವರು , ಬಸ್ ಅಪಘಾತದಿಂದ ಗಾಯಗೊಂಡ ಬಳಿಕ ಕುಮಟಾ ತಾಲೂಕು ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದು, ಇದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ತನ್ನ ಹೆಂಡತಿ ನಾಗರತ್ನ, ಮಗ ವಿಠೋಬ, ಸಹಪ್ರಯಾಣಿಕರಾದ ನಾಗರಾಜ ಕಾನಡೆ, ಕಾವೇರಿ ಅಂಗಡಿ, ಈರಪ್ಪ ಅಂಗಡಿ ಅವರಿಗೂ ಗಾಯ ನೋವುಗಳಾದ ಕುರಿತು ಉಲ್ಲೇಖಿಸಿ ಪೊಲೀಸ್ ದೂರು ನೀಡಿದ್ದು, ಬಸ್ ಚಾಲಕನ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಅಂಕೋಲಾ ಕರಾವಳಿ ಉತ್ಸವ 2025 : ನವೆಂಬರ್ 5 ರಿಂದ 10ರ ವರೆಗೆ ಸಾಂಸ್ಕೃತಿಕ ವೈಭವ

ಅಂಕೋಲಾ: ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಂದಿರುವ ಅಂಕೋಲಾ ತಾಲೂಕಿನಲ್ಲಿ ಅಂಕೋಲಾ ಸಾಂಸ್ಕೃತಿಕ ಕಲಾಬಳಗ ಉತ್ತರ ಕನ್ನಡ ಸಂಘಟನೆಯ ವತಿಯಿಂದ ಮಾಜಿ ಶಾಸಕಿ ರೂಪಾಲಿ ನಾಯ್ಕ ಅವರ ಗೌರವಾಧ್ಯಕ್ಷತೆಯಲ್ಲಿ ಅಂಕೋಲಾ ಕರಾವಳಿ ಉತ್ಸವ 2025...

ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ ಬೃಹತ್ ಆಹಾರ ಮತ್ತು ಸ್ವದೇಶೀ ಮೇಳ: ಅಕ್ಟೋಬರ್ 7, 8,9 ರಂದು ಆಯೋಜನೆ

ಅಂಕೋಲಾ : ರಾಘವೇಂದ್ರ ಇವೆಂಟ್ಸ್ ಅಂಕೋಲಾ ಹಾಗೂ ಬೆನಕ ಇವೆಂಟ್ಸ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ 7, 8 ಹಾಗೂ 9 ರಂದು ಪಟ್ಟಣದ ನಾಡವರ ಸಮುದಾಯ ಭವನದಲ್ಲಿ ಬೃಹತ್...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

KDCC ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ವಸಂತ ನಾಯಕ ಜಮಗೋಡ : ಈ ಬಾರಿ ಹೆಚ್ಚಿದ ಗೆಲುವಿನ ನಿರೀಕ್ಷೆ

ಅಂಕೋಲಾ : ಸಹಕಾರಿ ಮತ್ತು ಸಾಮಾಜಿಕ, ಧಾರ್ಮಿಕ ಮತ್ತಿತರ ಕ್ಷೇತ್ರಗಳಲ್ಲಿ ಸದಾ ಮಂಚೂಣಿಯಲ್ಲಿರುವ ನಾಯಕ ಎಂದು...

ಅಂಕೋಲಾ ಕರಾವಳಿ ಉತ್ಸವ 2025 : ನವೆಂಬರ್ 5 ರಿಂದ 10ರ ವರೆಗೆ ಸಾಂಸ್ಕೃತಿಕ ವೈಭವ

ಅಂಕೋಲಾ: ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಂದಿರುವ ಅಂಕೋಲಾ ತಾಲೂಕಿನಲ್ಲಿ ಅಂಕೋಲಾ ಸಾಂಸ್ಕೃತಿಕ ಕಲಾಬಳಗ ಉತ್ತರ ಕನ್ನಡ ಸಂಘಟನೆಯ...

ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ ಬೃಹತ್ ಆಹಾರ ಮತ್ತು ಸ್ವದೇಶೀ ಮೇಳ: ಅಕ್ಟೋಬರ್ 7, 8,9 ರಂದು ಆಯೋಜನೆ

ಅಂಕೋಲಾ : ರಾಘವೇಂದ್ರ ಇವೆಂಟ್ಸ್ ಅಂಕೋಲಾ ಹಾಗೂ ಬೆನಕ ಇವೆಂಟ್ಸ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ...

ಸೇವಾಪರ್ವ ವಿಕಸಿತ ಭಾರತ ವಿಷಯಾಧಾರಿತ ಪೇಟಿಂಗ್ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದರ್ಶನ ನಾಯ್ಕ

ಭಟ್ಕಳ: ಕೇಂದ್ರ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ತಂಜಾವೂರು ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ವಿಕ್ಷಿತ್ ಭಾರತ್...

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ...

ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಹೊನ್ನಾವರ ಇದರ ವಾರ್ಷಿಕ ಸರ್ವ ಸಾಧಾರಣ

ಹೊನ್ನಾವರ : ಇಲ್ಲಿನ ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ...

ಮಾನವೀಯತೆಯ ದೀಪ ಬೆಳಗಿಸಿದ ನೇತ್ರದಾನಿ ಕೃಷ್ಣ ನಾಯ್ಕ ಅಮರ

ಕುಮಟಾ : ತಾಲೂಕಿನ ಧಾರೇಶ್ವರ ಹೋಬಳಿ ಹರನೀರು ತುದಿಮನೆ ನಿವಾಸಿ ಕೃಷ್ಣ ನಾರಾಯಣ ನಾಯ್ಕ (77...

ಬಸ್ ಗೆ ಡಿಕ್ಕಿ ಹೊಡೆದ ಲಾರಿ : ಸ್ಟೇರಿಂಗ್ ಮಧ್ಯ ಸಿಲುಕಿದ ಲಾರಿ ಚಾಲಕ ಸಾವು: ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲಿಯೇ ನಿಧನ

ಅಂಕೋಲಾ: ಟ್ಯಾಂಕರ್ ಲಾರಿ ಮತ್ತು ಸಾರಿಗೆ ಸಂಸ್ಥೆಯ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...