Important

ಪಲ್ಟಿಯಾದ ಬಸ್: 45 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Share

ಅಂಕೋಲಾ: ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಒಂದಾಗಿರುವ ಗೋಕರ್ಣ ವಡ್ದೀಘಾಟ ಹೆದ್ದಾರಿ ತಿರುವಿನಲ್ಲಿ ಸಾರಿಗೆ ಸಂಸ್ಥೆಯ ಬಸ್ಸೊಂದು ಅದಾವುದೋ ಕಾರಣದಿಂದ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆಯುತ್ತಾ ತಗ್ಗು ಪ್ರದೇಶದಲ್ಲಿ ಉರುಳಿದ ಘಟನೆ ಶನಿವಾರ ಸಂಭವಿಸಿದೆ.

ಶಿರಸಿ ಕಡೆಯಿಂದ ಕುಮಟಾ ಕಡೆ ಹೋಗುತ್ತಿದ್ದ ಕೆ.ಎ 31/ ಎಫ್ 1630 ನೊಂದಣಿ ಸಂಖ್ಯೆಯ ಬಸ್ ಇದಾಗಿದ್ದು, ಅಂಕೋಲಾ ತಾಲೂಕಿನ ಅಚವೆ ಗ್ರಾಮ ವ್ಯಾಪ್ತಿಯ ವಡ್ಡೀಘಾಟ್ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ಈ ರಸ್ತೆ ಅವಘಡದಿಂದ ಬಸ್ಸಿನಲ್ಲಿದ್ದ 45 ಕ್ಕೂ ಹೆಚ್ಚು ಪ್ರಯಾಣಿಕರಲ್ಲಿ ಹಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಹಲವು ಗಾಯಾಳುಗಳನ್ನು ಅಂಕೋಲಾ ಮತ್ತು ಕುಮಟಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು ಅದೃಷ್ಟವಶಾತ್ ಚಾಲಕ -ನಿರ್ವಾಹಕ , ಮತ್ತು ಪ್ರಯಾಣಿಕರೆಲ್ಲರೂ ಸಂಭವನೀಯ ಭಾರೀ ಅಪಾಯ ಮತ್ತು ಅನಾಹುತದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಕುಮಟಾ ಘಟಕಕ್ಕೆ ಸೇರಿದ ಈ ಬಸ್ಸು, ಬಳ್ಳಾರಿಯಿಂದ ಶಿರಸಿ ಮಾರ್ಗವಾಗಿ ವಡ್ಡೀಘಾಟ ಬಳಿ ಸಂಚರಿಸುತ್ತಿರುವಾಗ ಆಕಸ್ಮಿಕ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಸಾರಿಗೆ ಸಂಸ್ಥೆಯ ಅಧಿಕಾರಿಗಳು , ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಅಪಘಾತದ ಘಟನೆ ಕುರಿತಂತೆ ಮತ್ತಷ್ಟು ಹೆಚ್ಚಿನ ಹಾಗೂ ಅಧಿಕೃತ ಮಾಹಿತಿ ತಿಳಿದು ಬರಬೇಕಿದೆ.

ಬಸ್ ಚಾಲಕನ ಅತಿ ವೇಗ ಹಾಗೂ ನಿರ್ಲಕ್ಷ್ಯತನದ ಚಾಲನೆಯಿಂದಲೇ ಈ ಅಪಘಾತ ಸಂಭವಿಸಿದ್ದು ಆತನ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಏರ್ಪೋರ್ಟ್ ಮೆನೇಜರ್ ವೃತ್ತಿಯ , ಹೊನ್ನಾವರ ಅರೆ ಯಂಗಡಿ – ನೀಲಕೋಡ ನಿವಾಸಿ ದೀಪಕ ಉಲ್ಲಾಸ್ ಕಾಮತ್ ಎನ್ನುವವರು , ಬಸ್ ಅಪಘಾತದಿಂದ ಗಾಯಗೊಂಡ ಬಳಿಕ ಕುಮಟಾ ತಾಲೂಕು ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದು, ಇದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ತನ್ನ ಹೆಂಡತಿ ನಾಗರತ್ನ, ಮಗ ವಿಠೋಬ, ಸಹಪ್ರಯಾಣಿಕರಾದ ನಾಗರಾಜ ಕಾನಡೆ, ಕಾವೇರಿ ಅಂಗಡಿ, ಈರಪ್ಪ ಅಂಗಡಿ ಅವರಿಗೂ ಗಾಯ ನೋವುಗಳಾದ ಕುರಿತು ಉಲ್ಲೇಖಿಸಿ ಪೊಲೀಸ್ ದೂರು ನೀಡಿದ್ದು, ಬಸ್ ಚಾಲಕನ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ ಗುರುವಾರ, 10ರ ಶುಕ್ರವಾರ ಶ್ರೀಕ್ಷೇತ್ರ ಗೋಕರ್ಣಕ್ಕೆ ಆಗಮಿಸಲಿದೆ. ಏಪ್ರಿಲ್ 9 ರಂದು ರಥಬೀದಿಯಲ್ಲಿರುವ ರಾಮಚಂದ್ರ...

ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ

ಹೊನ್ನಾವರ: ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ವಡ್ನಾಳ್ ಜಗದೀಶ್ ರವರು ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ’ ದಲ್ಲಿ ಹೇಳಿದರು....

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...

ನರ್ಸ್ ವೃತ್ತಿ ಮತ್ತು ಕುಟುಂಬ ಜವಾಬ್ದಾರಿಗಳ ನಡುವೆಯೇ ಸಾಧನೆ ಮಾಡಿದ ಪೂಜಾ ನಾಯ್ಕ

ಕುಮಟಾ :- ತಾಲೂಕಿನ ಕಲಭಾಗ ಗ್ರಾಮ ನಿವಾಸಿ ಪೂಜಾ ಸಂತೋಷ ನಾಯ್ಕ ಅವರು 2024–26ನೇ ಸಾಲಿನ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ...