Focus News

ಕೇಣಿ ವಾಣಿಜ್ಯ ಬಂದರು ವಿರೋಧಿಸಿ ಹೋರಾಟ ನಿರಂತರ : ಬಹಿರಂಗ ಸಭೆ ತಾತ್ಕಾಲಿಕವಾಗಿ ಮುಂದೂಡಿಕೆ : ಸಂಘಟಕ ಪ್ರಮುಖರು ಪ್ರಕಟಣೆಯಲ್ಲಿ ಹೇಳಿದ್ದೇನು ?

Share

ಅಂಕೋಲಾ: ತಾಲೂಕಿನ ಕೇಣಿಯಲ್ಲಿ ನಿರ್ಮಾಣ ಉದ್ದೇಶಿತ ವಾಣಿಜ್ಯ ಬಂದರು ಯೋಜನೆಯನ್ನು ವಿರೋಧಿಸಿ, ಸಾಮೂಹಿಕ ನಾಯಕತ್ವದಡಿ, ಅಂಕೋಲಾ ಮತ್ತು ಉತ್ತರ ಕನ್ನಡ ಉಳಿಸಿ ಎಂಬ ಧ್ಯೇಯ ವಾಕ್ಯದೊಂದಿಗೆ , ಇದೇ ತಿಂಗಳ ಕೊನೆ ವಾರದಲ್ಲಿ ರಾಜ್ಯದ ವಿವಿಧ ಸಾಮಾಜಿಕ ಹೋರಾಟಗಾರ ನಾಯಕರ ಪಾಲ್ಗೊಳ್ಳುವಿಕೆಯಲ್ಲಿ ಅಕ್ಟೋಬರ್ 23 ರಂದು ಜ್ಯೆ ಹಿಂದ್ ಮೈದಾನದಲ್ಲಿ ಆಯೋಜಿಸಬೇಕೆಂದಿದ್ದ ಬೃಹತ್ತ ಬಹಿರಂಗ ಸಭೆ ಮತ್ತು ತಹಶೀಲ್ದಾರ ಕಾರ್ಯಾಲಯದ ಎದುರಿನ ಹೊರ ಆವರಣದಲ್ಲಿ ನಡೆಸ ಬೇಕೆಂದಿದ್ದ ಧರಣಿ ಸತ್ಯಾಗ್ರಹವನ್ನು , ತಾತ್ಕಾಲಿಕವಾಗಿ ಮುಂದೂಡಿರುವುದಾಗಿ ಹಾಗೂ ನಮ್ಮ ಹೋರಾಟ ಮುಂದೆ ನಿರಂತರವಾಗಿರುವುದಾಗಿ ಸಂಜೀವ ಬಲೆಗಾರ ಸೇರಿದಂತೆ ಇತರೆ ಸಂಘಟಕ ಪ್ರಮುಖರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಅಗಸ್ಟ್ 22 ರಂದು ನಡೆದ ವಾಣಿಜ್ಯ ಬಂದರು ಯೋಜನೆಯ ಪರಿಸರ ಆಲಿಕೆ ಸಭೆಯ ನಂತರ ಯೋಜನೆಯನ್ನು ವಿರೋಧಿಸಿ ಅಪಾರ ಜನ ಬೆಂಬಲ ವ್ಯಕ್ತವಾಗುತ್ತಿದ್ದು ಎಲ್ಲರ ಸಲಹೆ, ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ನಿರಂತರ ಹೋರಾಟ ಮಾಡುವ ಉದ್ದೇಶದೊಂದಿಗೆ , ಅ 2 ರ ಗಾಂಧೀ ಜಯಂತಿಯಂದು , ಪಟ್ಟಣದ ಗಾಂಧೀ ಮೈದಾನದ ಸ್ವರ್ಣ ಉದ್ಯಾನವನದಲ್ಲಿರುವ ಗಾಂಧಿ ಮೂರ್ತಿ ಎದುರು ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡು, ಮುಂದಿನ ಹಂತದ ಹೋರಾಟಕ್ಕೆ ಸಜ್ಜಾಗುತ್ತಿದ್ದೆವು.

ಆದರೆ ಜನರು ಈಗ ದೀಪಾವಳಿ ಹಬ್ಬದ ಸಂಭ್ರಮ ಮತ್ತು ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರು ಮತ್ತಿತರರು ಭತ್ತದ ಬೆಳೆಯ ಕಟಾವು ಮತ್ತಿತರ ತುರ್ತು ಅಗತ್ಯ ಕೆಲಸ ಕಾರ್ಯಗಳಲ್ಲಿ ನಿರತರಾಗಬೇಕಿರುವುದು, ಸಭೆ ನಡೆಯುವ ಜೈಹಿಂದ್ ಮೈದಾನದಲ್ಲಿ ಬೇರೆ ಬೇರೆ ಸಂಘಟನೆಗಳು ಕ್ರಿಕೆಟ್ ಪಂದ್ಯಾವಳಿ ಆಯೋಜಿಸುತ್ತಿರುವುದು, ಅಂಕೋಲಾ ಕರಾವಳಿ ಉತ್ಸವ ಮತ್ತಿತರ ಕಾರ್ಯಕ್ರಮಗಳನ್ನು ಸಂಘಟಿಸುತ್ತಿರುವುದು, ಆಗಾಗ ಸುರಿಯುತ್ತಿರುವ ಮಳೆ ಮತ್ತಿತರ ಕಾರಣಗಳು ಹಾಗೂ 22 ರ ಮಧ್ಯಾಹ್ನದಿಂದ ತಡ ರಾತ್ರಿ ವರೆಗೆ ಪಟ್ಟಣದಲ್ಲಿ ಹೊಂಡೆ ಉತ್ಸವ ಕಾರ್ಯಕ್ರಮಗಳಿರುವುದರಿಂದ ಸಹಜವಾಗಿ ಇಂಥ ಸಂದರ್ಭಗಳಲ್ಲಿ ನಮಗೂ ಅನಿವಾರ್ಯ ಒತ್ತಡ ಇರುವುದರಿಂದ ಸಭೆಯನ್ನು ಅಕ್ಟೋಬರ್ 23 ರಂದು ನಡೆಸಲು ಕಷ್ಟ ಸಾಧ್ಯವಾಗಿರುವುದರಿಂದ,ನಮ್ಮ ಸಂಘಟನೆಯ ಮೀನುಗಾರರು ,ರೈತರು, ಕೂಲಿಕಾರ್ಮಿಕರು, ಮಧ್ಯಮವರ್ಗದವರು , ಸೇರಿದಂತೆ ಸುತ್ತ ಮುತ್ತಲಿನ ಹತ್ತಾರು ಹಳ್ಳಿಗಳ ಹೋರಾಟಗಾರ ಮಿತ್ರ ಬಳಗದ ಬಹುತೇಕರ ಅಭಿಪ್ರಾಯದಂತೆ, ಉದ್ದೇಶಿತ ಬಹಿರಂಗ ಸಭೆ ಮತ್ತು ಧರಣಿ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಮುಂದೂಡುವುದು ಅನಿವಾರ್ಯವಾಗಿದೆ ಎಂದು ಹೋರಾಟ ಸಮಿತಿಯ ವತಿಯಿಂದ ತಿಳಿಸಲಾಗಿದೆ.

ವಾಣಿಜ್ಯ ಬಂದರು ಯೋಜನೆಯ ವಿರುದ್ಧ ನ್ಯಾಯದ ಹಾದಿಯ ಹೋರಾಟ ನಿರಂತರ ಮುಂದುವರಿಯಲಿದ್ದು ಪ್ರತಿಭಟನೆ,
ಧರಣಿ ಸತ್ಯಾಗ್ರಹ, ಜಿಲ್ಲಾ ಕೇಂದ್ರಕ್ಕೆ ಪಾದಯಾತ್ರೆ ಮೊದಲಾದ ಹೋರಾಟದ ರೂಪರೇಶೆಗಳ ಕುರಿತು ಮುಂದಿನ ದಿನಗಳಲ್ಲಿ ಮತ್ತೆ ಚರ್ಚಿಸಿ, ದಿನಗಳನ್ನು ನಿಗದಿಪಡಿಸಿ ಅಧಿಕೃತ ಪ್ರಕಟಣೆ ಮೂಲಕ ಮಾಹಿತಿ ನೀಡಲಾಗುವುದು, ಹೀಗಾಗಿ ಅಂಕೋಲಾ ಮತ್ತು ಉತ್ತರ ಕನ್ನಡ ಉಳಿಸಿ ದ್ಯೇಯವಾಕ್ಯದೊಂದಿಗೆ ನಡೆಯುವ ಹೋರಾಟಕ್ಕೆ ಮುಂದೆಯೂ ತಮ್ಮೆಲ್ಲರ ಸಹಕಾರ ಬಯಸುತ್ತಿರುವುದಾಗಿ ಹೋರಾಟಗಾರ ಮುಖಂಡರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಒಂದಾನು ವೇಳೆ ಮಾಹಿತಿ ಕೊರತೆಯಿಂದ ಯಾರಾದರೂ ತಮ್ಮಲ್ಲಿ ಅ23ರಂದು ಸಭೆ ಎಂದು ಗೊಂದಲ ಮೂಡಿಸಲು ಯತ್ನಿಸಿದರೆ , ತಾವು ಅದಕ್ಕೆ ಕಿವಿ ಗೊಡದೇ , ನಮ್ಮ ಸಂಘಟನೆಯವರ ಹೇಳಿಕೆಯನ್ನು ಮಾತ್ರ ಅಧಿಕೃತ ಎಂದು ತಿಳಿದು ಈ ಹಿಂದಿನಂತೆ ಸಹಕರಿಸಲು ಕೋರಿಕೊಳ್ಳಲಾಗಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

KDCC ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ವಸಂತ ನಾಯಕ ಜಮಗೋಡ : ಈ ಬಾರಿ ಹೆಚ್ಚಿದ ಗೆಲುವಿನ ನಿರೀಕ್ಷೆ

ಅಂಕೋಲಾ : ಸಹಕಾರಿ ಮತ್ತು ಸಾಮಾಜಿಕ, ಧಾರ್ಮಿಕ ಮತ್ತಿತರ ಕ್ಷೇತ್ರಗಳಲ್ಲಿ ಸದಾ ಮಂಚೂಣಿಯಲ್ಲಿರುವ ನಾಯಕ ಎಂದು ಗುರುತಿಸಿಕೊಂಡಿರುವ, ತಾಲೂಕಿನ ಶ್ರೀರಾಮ ಪರಿಸರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ವಸಂತ ನಾಯಕ...

ಅಂಕೋಲಾ ಕರಾವಳಿ ಉತ್ಸವ 2025 : ನವೆಂಬರ್ 5 ರಿಂದ 10ರ ವರೆಗೆ ಸಾಂಸ್ಕೃತಿಕ ವೈಭವ

ಅಂಕೋಲಾ: ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಂದಿರುವ ಅಂಕೋಲಾ ತಾಲೂಕಿನಲ್ಲಿ ಅಂಕೋಲಾ ಸಾಂಸ್ಕೃತಿಕ ಕಲಾಬಳಗ ಉತ್ತರ ಕನ್ನಡ ಸಂಘಟನೆಯ ವತಿಯಿಂದ ಮಾಜಿ ಶಾಸಕಿ ರೂಪಾಲಿ ನಾಯ್ಕ ಅವರ ಗೌರವಾಧ್ಯಕ್ಷತೆಯಲ್ಲಿ ಅಂಕೋಲಾ ಕರಾವಳಿ ಉತ್ಸವ 2025...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಚಿಪ್ಪಿ ಫ್ಯಾಕ್ಟರಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತ ದೇಹ ಪತ್ತೆ

ಅಂಕೋಲಾ: ತಾಲೂಕಿನ ಶೆಟಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...

ಆಧುನಿಕ ಜಗತ್ತನ್ನಾಳಲಿರುವ AI ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

ಅಂಕೋಲಾ : ಕೃತಕ ಬುದ್ಧಿಮತ್ತೆಯು ( AI ತಂತ್ರಜ್ಞಾನ ) ತ್ವರಿತವಾಗಿ ಮಾಹಿತಿ ಪಡೆಯುವ ಹೊಸತನದ...

ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ ವಿಶೇಷ ಅಭಿಯಾನ

ಅಂಕೋಲಾ : ತಾಲೂಕಿನ ವಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋಳೆ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಗೆ...

ಅಂಕೋಲಾ ಕಲ್ಲೇಶ್ವರದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

ಅಂಕೋಲಾ : ಒನ್‌ ಲೈಟ್‌ ಎಸ್ಸಿಲಾರ್ ಲಕ್ಸೊಟಿಕಾ ಫೌಂಡೇಶನ್, ಸ್ಪಂದನ ಸೇವಾ ಟ್ರಸ್ಟ್ ಹಡಿನಬಾಳ ಹೊನ್ನಾವರ,ಸಂಗಮ...

ಹೊನ್ನಾವರದಲ್ಲಿ ಸಾರ್ವಜನಿಕ ಗಣೇಶೋತ್ಸವ ಮೂರ್ತಿಯ ವಿಸರ್ಜನೆ: ಅದ್ಧೂರಿ ಮೆರವಣಿಗೆ

ಹೊನ್ನಾವರ: ಪಟ್ಟಣದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಚವತಿಯ ದಿನದಂದು ಪ್ರತಿಷ್ಠಾಪಿಸಿದ ಗಣಪನನ್ನು ವಿಜೃಂಭಣೆಯಿoದ ಆಚರಿಸಿ 7...

KEB ಗಣಪನಿಗೆ 48 ನೇ ವಾರ್ಷಿಕ ಸಂಭ್ರಮ: ಸೆ.4 ಮಹಾಪೂಜೆ – ಸೆ.5 ರಂದು ಭವ್ಯ ಮೆರವಣಿಗೆಯೊಂದಿಗೆ ವಿಸರ್ಜನೆ

ಅಂಕೋಲಾ: ತಾಲೂಕಿನ ಹೆಸ್ಕಾಂ ಇಲಾಖೆ ವತಿಯಿಂದ 48 ನೇ ವರ್ಷದ ಗಣೇಶೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ...

ವಿಶ್ರಾಂತ ಶಿಕ್ಷಕ ಉಮೇಶ ನಾಯ್ಕ ಅವರಿಗೆ ಬರ್ಗಿಯ ಶ್ರೀ ಮಹಾಲಿಂಗೇಶ್ವರ ವಿದ್ಯಾಪೀಠದಿಂದ ಸನ್ಮಾನ: “ಸದ್ಗುರು ಸಂಪನ್ನ” ಅಭಿದಾನ ಪ್ರದಾನ

ಕುಮಟಾ: ತಾಲ್ಲೂಕಿನ ಬರ್ಗಿಯ ಶ್ರೀ ಮಹಾಲಿಂಗೇಶ್ವರ ವಿದ್ಯಾಪೀಠದಿಂದ ಶಿಕ್ಷಕ ವೃತ್ತಿಯಿಂದ ವಯೋನಿವೃತ್ತಿಗೊಂಡ ಸ್ಥಳೀಯರಾದ ಉಮೇಶ ನಾಯ್ಕರವರನ್ನು...

ಉತ್ತರ ಕನ್ನಡದಲ್ಲಿ ಭಾರೀ ಮಳೆ : ಮೂರು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹದ ಭೀತಿ ಹೆಚ್ಚಾಗಿದೆ.  ತಗ್ಗು ಪ್ರದೇಶಗಳಿಗೆ...