Big News

ಅಂಕೋಲಾದಲ್ಲಿ ಕರಾಳ ದಿನಾಚರಣೆ ಮತ್ತು ಬಂದ್ ಗೆ ಕರೆ

Share

ಅಂಕೋಲಾ: ಕೇಣಿ ವಾಣಿಜ್ಯ ಬಂದರು ಯೋಜನೆ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ನವೆಂಬರ್ 15ರಂದು ಒಂದು ವರ್ಷವಾಗಲಿದ್ದು ಅಂಕೋಲಾದಲ್ಲಿ ಕರಾಳ ದಿನಾಚರಣೆ ಮತ್ತು ಬಂದ್ ಗೆ ಕರೆ ನೀಡಲಾಗಿದೆ. ಈ ನಡುವೆ ತಹಶೀಲ್ದಾರ್ ಕಾರ್ಯಾಲಯದ ಎದುರು ನಡೆಸುತ್ತಿರುವ ಧರಣಿ ಸತ್ಯಾಗ್ರಾಹದ 13ನೇ ದಿನ ಕೇಣಿ ಹಾಗೂ ಬಡಗೇರಿ ಭಾಗದ ಕೃಷಿಕರು, ಬೆಲೇಕೇರಿ ಭಾಗದ ಮೀನುಗಾರರು, ಇತರೆ ಕೆಲ ಸಂಘಟನೆಗಳು ಪಾಲ್ಗೊಂಡು ಅಂಕೋಲಾ ಮತ್ತು ಉತ್ತರ ಕನ್ನಡ ಉಳಿಸಿ ಹೋರಾಟಗಾರರಿಗೆ ಬೆಂಬಲ ಸೂಚಿಸಿದರು.

ಅಂಕೋಲಾ ತಾಲೂಕಿನ ಕೇಣಿಯಲ್ಲಿ ಉದ್ದೇಶಿತ ಕೇಣಿ ವಾಣಿಜ್ಯ ಬಂದರು ಯೋಜನೆಗೆ ಸ್ಥಳೀಯರಿಂದ ಈ ಹಿಂದೆ ಭಾರಿ ವಿರೋಧ ವ್ಯಕ್ತವಾಗಿತ್ತು. ಇದೀಗ ಬಂದರು ವಿರೋಧಿ ಕಿಚ್ಚು ಕೇಣಿ ಭಾಗದ ಮೀನುಗಾರರಿಗಷ್ಟೇ ಅಲ್ಲದೆ ಸುತ್ತಮುತ್ತಲ ಹಲಮ ಹಳ್ಳಿಗಳು ಹಾಗೂ ಪಟ್ಟಣ ವ್ಯಾಪ್ತಿಯಲ್ಲೂ ಪ್ರತಿಧ್ವನಿಸುವಂತಾಗಿದ್ದು,ರೈತರು, ಕೃಷಿ ಕೂಲಿ ಕಾರ್ಮಿಕರು ಸೇರಿದಂತೆ ಸಮಾಜದ ವಿವಿಧ ವರ್ಗಗಳ ಜನರು ,ಜಾತಿ ಮತ ಬೇದ ಮರೆತು ಸಾಮೂಹಿಕ ನಾಯಕತ್ವದಲ್ಲಿ ಅಂಕೋಲಾ ಮತ್ತು ಉತ್ತರ ಕನ್ನಡ ಉಳಿಸಿ ಎಂಬ ಧ್ಯೇಯದೊಂದಿಗೆ ನಿರಂತರ ಹೋರಾಟ ಮುಂದುವರಿಸಿದ್ದಾರೆ. ಕಳೆದ ವರ್ಷ ನವೆಂಬರ್ 24ರಂದು ಕೇಣಿ ಕಡಲ ತೀರದ ಮೂಲಕ ಆರಂಭವಾಗಿದ್ದ ಹೋರಾಟ, ಈ ವರ್ಷದ ನವಂಬರ್ 25ರಂದು ಒಂದು ವರ್ಷಕ್ಕೆ ತಲುಪಲಿದೆ.

ಈ ಹಿನ್ನಲೆಯಲ್ಲಿ ಅಂಕೋಲಾದಲ್ಲಿ ಕರಾಳ ದಿನಾಚರಣೆ ಮತ್ತು ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಲಾಗಿದ್ದು ,ಮಂಗಳವಾರ ಬೆಳಿಗ್ಗೆ ಪಟ್ಟಣದ ಜೈಹಿಂದ್ ಸರ್ಕಲ್ ಬಳಿ ಸಾವಿರಾರು ಹೋರಾಟಗಾರರು ಸೇರಿ ಪಟ್ಟಣ ವ್ಯಾಪ್ತಿಯಲ್ಲಿ ಬಂದರು ಭೂತದ ಅಣಕು ಶವಯಾತ್ರೆ ನಡೆಸಿ , ಬಳಿಕ ಬೃಹತ್ ಪ್ರತಿಭಟನಾ ಸಭೆ ನಡೆಸಲಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಮಂತ್ರಿಗಳು ಖುದ್ದು ಹಾಜರಿದ್ದು ಈಗಲಾದರೂ ತಮ್ಮ ಸಮಸ್ಯೆಯನ್ನು ಆಲಿಸುವಂತೆ,ಇಲ್ಲದಿದ್ದರೆ ಪ್ರತಿಭಟನಾ ಸ್ಥಳ ಬಿಟ್ಟು ಕದಲೂವುದಿಲ್ಲ ಎಂದು ತಹಶೀಲ್ದಾರ್ ಅವರ ಮೂಲಕ ಸಂಬಂಧಿಸಿದವರಿಗೆ ಆಗ್ರಹಿಸಿ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಈ ನಡುವೆ 13ನೇ ದಿನದ ಧರಣಿ ಸತ್ಯಾಗ್ರಹದಲ್ಲಿ ಕೇಣಿ ಬಾಗದಲ್ಲಿ ಕೃಷಿ ಬದುಕಿನ ಮೂಲಕ ಸಂತೃಪ್ತ ಜೀವನ ನಡೆಸುತ್ತಿರುವ ಕೋಮಾರ್ ಪಂಥ ಸಮಾಜದವರು,ಬಡಗೇರಿಯ ಹಾಲಕ್ಕಿ ಸಮಾಜದವರು, ಬೆಲೇ ಕೇರಿಯ ಮೀನುಗಾರರು ಮತ್ತಿತರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬಂದರು ಯೋಜನೆ ವಿರುದ್ಧ ದಿಕ್ಕಾರ ಕೂಗಿ ನಮ್ಮ ಸಾಂಕೇತಿಕ ಪ್ರತಿಭಟನೆ ನಡೆಸಿ,ರಕ್ತದ ಹೆಬ್ಬಟ್ಟಿನ ಮುದ್ರೆಯುಳ್ಳ ಪೋಸ್ಟ್ ಕಾರ್ಡ್ ಚಳುವಳಿ ಮೂಲಕ ಹಾಗೂ ತಹಶೀಲ್ದಾರ್ ಮೂಲಕ ಪ್ರತ್ಯೇಕ ಮನವಿಯನ್ನು ಮುಖ್ಯಮಂತ್ರಿಗಳಿಗೆ ರವಾನಿಸಿ ಕೇಣಿ ವಾಣಿಜ್ಯ ಬಂದರು ಯೋಜನೆ ಕೈ ಬಿಡುವಂತೆ ಆಗ್ರಹಿಸಿದ್ದು,ಸರ್ಕಾರ ಸ್ಥಳೀಯರ ಭಾವನೆಗೆ ಸ್ಪಂದಿಸದಿದ್ದಲ್ಲಿ ಕೇಣಿ ವಾಣಿಜ್ಯ ಬಂದರು ವಿರೋಧಿಸಿ ಅಂಕೋಲಾ ಮತ್ತು ಉತ್ತರ ಕನ್ನಡ ಉಳಿಸಿ ಎಂಬ ಧ್ಯೇಯದ ಸರ್ವ ಸಮಾಜದ ಸಾಮೂಹಿಕ ನಾಯಕತ್ವದ ಹೋರಾಟಗಾರರರಿಗೆ ಬೆಂಬಲಿಸುವ ಮೂಲಕ ಮುಂದಿನ ದಿನಗಳಲ್ಲಿ ಉಗ್ರ ಹೋರಾಟಕ್ಕೂ ಸಿದ್ದರಿರುವುದಾಗಿ ಎಚ್ಚರಿಸಿದ್ದಾರೆ.

ವಿಶ್ವ ಮಾನವ ಹಕ್ಕುಗಳ ಸಮಿತಿ ಡಬ್ಲ್ಯು ಎಚ್ ಆರ್ ಕೆ ಪೌಂಡೇಶನ್ ಅಂಕೋಲಾ ಘಟಕದ ವತಿಯಿಂದಲೂ ತಹಶೀಲ್ದಾರ್ ಅವರಿಗೆ ಪ್ರತ್ಯೇಕ ಮನವಿ ನೀಡಿ,ವಾಣಿಜ್ಯ ಬಂದರು ವಿರೋಧಿ ಹೋರಾಟಕ್ಕೆ ಬೆಂಬಲ ಸೂಚಿಸಿ,ಮಾಣಿಕ್ಯ ಬಂದರು ಯೋಜನೆ ಕೈ ಬಿಡುವಂತೆ ಒತ್ತಾಯಿಸಿದ್ದಾರೆ.

ನವಂಬರ್ 25ರಂದು ವಾಣಿಜ್ಯ ಬಂದರು ಯೋಜನೆ ವಿರೋಧಿಸಿ ನಡೆಸುತ್ತಿರುವ ಕರಾಳ ದಿನ ಮತ್ತು ಬಂದ್ ಆಚರಣೆಗೆ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆಯ ತಾಲೂಕ ಘಟಕ ಮತ್ತು ಅಂಕೋಲಾದ ವಕೀಲರ ಸಂಘ ಮತ್ತಿತರ ಸಂಘಟನೆಗಳು ಸಹ ಬಹಿರಂಗ ಬೆಂಬಲ ಘೋಷಿಸಿದ್ದು,ವಿವಿಧ ರಾಜಕೀಯ ಪಕ್ಷಗಳು,ಸಂಘ ಸಂಸ್ಥೆಗಳು,ಸಾಮಾಜಿಕ ಮತ್ತು ಪರಿಸರ ಹೋರಾಟಗಾರರು,ಸೇರಿದಂತೆ ಹಲವರು ಬೆಂಬಲ ವ್ಯಕ್ತಪಡಿಸುತ್ತಿದ್ದು, ವಾಣಿಜ್ಯ ಬಂದರು ವಿರೋಧಿ ಹೋರಾಟ ಮತ್ತಷ್ಟು ಬಲಗೊಳ್ಳುತ್ತಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಆಗಿದ್ದು, ಇದೀಗ ಶನಿವಾರ ( ನವೆಂಬರ್ 8 ರಂದು ) ರಾತ್ರಿ...

ಕಲಾಸಿರಿ ಪ್ರಶಸ್ತಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಬೆಳಗಲು ಸಾಧ್ಯ:ಪಿ. ಆರ್. ನಾಯ್ಕ

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಇತರರ ಬದುಕಿನಲ್ಲೂ ಸದಾ ಬೆಳಗಲು ಸಾಧ್ಯ ಎಂದು ಕಲಾಸಿರಿ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಪಿ....

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಕಲಾಸಿರಿ ಪ್ರಶಸ್ತಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಬೆಳಗಲು ಸಾಧ್ಯ:ಪಿ. ಆರ್. ನಾಯ್ಕ

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು...

ವರ್ಷಾಂತ್ಯಕ್ಕೆ 12 ಲಕ್ಷ ಲಾಭ ಗಳಿಸಿದ ಸೀತಾರಾಮ ಸಹಕಾರಿ ಸಂಘ

ಭಟ್ಕಳ: ಆರ್ಥಿಕ ವರ್ಷಾಂತ್ಯಕ್ಕೆ ಸಹಕಾರಿಯು 12 ಲಕ್ಷ ಲಾಭ ಗಳಿಸಿದೆ ಎಂದು ಶ್ರೀ ಸೀತಾರಾಮ ಸೌಹಾರ್ಧ...

ಬೈಕಿಗೆ ಡಿಕ್ಕಿ ಹೊಡದ ಲಾರಿ: ಸ್ಥಳದಲ್ಲಿಯೇ ಬೈಕ್ ಸವಾರ ದುರ್ಮರಣ: ಹಿಟ್ & ರನ್ ಕೇಸ್ ದಾಖಲು

ಯಲ್ಲಾಪುರ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ತೀವ್ರವಾಗಿ...

ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ : ಆರೋಪಿ ಬಂಧನ

ಅಂಕೋಲಾ: ಪಟ್ಟಣದಲ್ಲಿ ನಿಲ್ಲಿಸಿಟ್ಟ ಮೋಟಾರ್ ಬೈಕ್ ಕಳ್ಳತನ ಮಾಡಿದ್ದ ಆರೋಪಿತನನ್ನು ಅಂಕೋಲಾ ಪೊಲೀಸರು ವಾಹನ ಸಮೇತ...

ರಾಷ್ಟ್ರೀಯ ಮೆಗಾ ಲೋಕ ಅದಾಲತ್ ನಲ್ಲಿ ಒಟ್ಟೂ 167 ಪ್ರಕರಣಗಳು ರಾಜೀ ಸಂಧಾನದಲ್ಲಿ ಇತ್ಯರ್ಥ

ಅಂಕೋಲಾ: ತಾಲೂಕಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಸೆ 13 ರ ಶನಿವಾರ...

ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ ಶಿಕ್ಷಕ ದಿನಾಚರಣೆ: ಶಿಕ್ಷಕ ರಾಷ್ಟ್ರ ರಕ್ಷಕ ಕಾರ್ಯಕ್ರಮ

ಕುಮಟಾ: ತಾಯಿ ಮಗುವಿಗೆ ಜನ್ಮ ನೀಡುತ್ತಾಳೆ, ಶಿಕ್ಷಕ ಆ ಮಗುವಿಗೆ ಜ್ಞಾನ ನೀಡಿ ಕಣ್ತೆರೆಯಿಸಿ ಒಳ್ಳೆಯ...

ಭೂಮಿತಾಯಿಯ ಹೊಸ್ತಿನ ಹಬ್ಬ : ಕೃಷಿ ಮತ್ತು ಶ್ರಮ ಪ್ರಧಾನ ಸಂಸ್ಕೃತಿಯ ಪ್ರತೀಕ

ಅಂಕೋಲಾ: ಭೂಮ್ತಾಯಿ ಎಂದೇ ಪ್ರಸಿದ್ಧಿ ಪಡೆದಿರುವ ತಾಲೂಕಿನ ಹಾಗೂ ಇತರಡೆಯ ಅಸಂಖ್ಯ ಭಕ್ತರ ಪಾಲಿನ ಶಕ್ತಿ...