Important

ತಗ್ಗು ಪ್ರದೇಶದಲ್ಲಿ ಪಲ್ಟಿಯಾದ ಸಾರಿಗೆ ಸಂಸ್ಥೆ ಬಸ್ : ಚಾಲಕ, ನಿರ್ವಾಹಕ , ಪುಟಾಣಿ ಮಗು ಸೇರಿ 26 ಕ್ಕೂ ಹೆಚ್ಚು ಜನರಿಗೆ ಗಾಯ – ನೋವು

Share

ಅಂಕೋಲಾ: ಸಾರಿಗೆ ಸಂಸ್ಥೆಯ ಬಸ್ ಒಂದು ಪಲ್ಟಿಯಾಗಿ ಚಾಲಕ , ನಿರ್ವಾಹಕ, ಪುಟ್ಟ ಮಗು ಹಾಗೂ ಇತರೆ ಪ್ರಯಾಣಿಕರೂ ಸೇರಿ ಸುಮಾರು 26ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಸುಂಕಸಾಳ – ವಜ್ರಳ್ಳಿ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಸಂಭವಿಸಿದ್ದು, ಇದರಲ್ಲಿ ಸುಮಾರು ಆರು ಪ್ರಯಾಣಿಕರಿಗೆ ತಲೆ ಮತ್ತಿತರ ಭಾಗಗಳಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.


ಪುಟಾಣಿ ಮಗು ಸೇರಿದಂತೆ ಮಹಿಳಾ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಗಾಯಗೊಂಡಿದ್ದು ಮೂರನಾಲ್ಕು ಆಂಬ್ಯುಲೆನ್ಸ್ ಮತ್ತು ಅರಣ್ಯ ಇಲಾಖೆ ಜೀಪ್ ಮತ್ತಿತರ ಖಾಸಗಿ ವಾಹನಗಳಲ್ಲಿಯೂ ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಗಂಭೀರ ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ರಾಯಚೂರಿನಿಂದ ಕಾರವಾರಕ್ಕೆ ತೆರಳುತ್ತಿದ್ದ ಬಸ್ಸಿನ, ಸ್ಟಿಯರಿಂಗ್ ಎಕ್ಸಲ್ ತುಂಡಾಗಿ ರಸ್ತೆ ಪಕ್ಕದ ತಗ್ಗು ಪ್ರದೇಶಕ್ಕೆ ತಲೆ ಕೆಳಗಾಗಿ ಉರುಳಿದ್ದು, ಮುಂಬದಿ ಚಕ್ರ ಬೇರ್ಪಟ್ಟು, ಬಸ್ ಪಲ್ಟಿಯಾಗಿರುವುದು ನೋಡಿದರೆ, ಅದೃಷ್ಟವಶಾತ್ ದೇವರ ದಯೆ ಇಂದನೇ ಹೆಚ್ಚಿನ ಅಪಾಯದಿಂದ ನಾವೆಲ್ಲ ಪಾರಾಗಿ ಬಂದೆವು ಎಂದು ಅಪಘಾತಗೊಂಡ ಕೆಲ ಪ್ರಯಾಣಿಕರು ಹೇಳಿಕೊಂಡು ,ಸಮಾಧಾನ ಪಟ್ಟಿಕೊಂಡಂತಿತ್ತು.

ಹೊಂಡ ಗುಂಡಿಗಳಿಂದ ತುಂಬಿರುವ ರಾಷ್ಟ್ರೀಯ ಹೆದ್ದಾರಿಯನ್ನು ಈ ವರೆಗೂ ದುರಸ್ತಿಗೊಳಿಸದಿರುವುದೇ ಅಪಘಾತ ಹೆಚ್ಚಲು ಕಾರಣವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಮಾದವ ನಾಯಕ ,ಹೆದ್ದಾರಿ ಇಲಾಖೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡು,ಮತ್ತೆ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸ ಬೇಕೆ ಎಂದು ಎಚ್ಚರಿಸಿದ್ದು,ನಾಳೆಯಿಂದಲೇ ಹೆದ್ದಾರಿ ಹೊಂಡ ಮುಚ್ಚುವ ಕಾರ್ಯ ನಡೆಸಲಾಗುವುದು ಎಂದು ಹೇಳಿ ಅಧಿಕಾರಿಗಳು ತಮ್ಮ ಮೇಲಿನ ಆರೋಪದಿಂದ ತಪ್ಪಿಸಿಕೊಳ್ಳಲು ಮಾರಿಕೆ ಉತ್ತರ ನೀಡಿದಂತಿತ್ತು.

ಈ ಭೀಕರ ರಸ್ತೆ ಅಪಘಾತಕ್ಕೆ ನಿಖರ ಕಾರಣ ಮತ್ತು ಅಪಘಾತದ ಘಟನೆಗೆ ಸಂಬಂಧಿಸಿದಂತೆ ಹಾಗೂ ಗಾಯಾಳುಗಳ ಬಗ್ಗೆ ಹೆಚ್ಚಿನ ಮತ್ತು ನಿಖರ ಮಾಹಿತಿ ತಿಳಿದು ಬರಬೇಕಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಅಂಕೋಲಾದಲ್ಲಿ ಇಂದು ಪಂಚದೇವರ ದೊಡ್ಡ ಕಾರ್ತಿಕೋತ್ಸವ : ಶಿರ ಕುಳಿ ಕಾನದೇವಿ ದೇವಸ್ಥಾನದ ಹತ್ತಿರ ವನಭೋಜನಕ್ಕೆ ನಡೆಯುತ್ತಿದೆ ಸಿದ್ದತೆ

ಅಂಕೋಲಾ: ತಾಲೂಕಿನ ಸಂಸ್ಕೃತಿಯ ಆರಾಧನಾ ಪದ್ಧತಿಯಾಗಿ ಹಲವು ತಲೆಮಾರುಗಳಿಂದ ಆಚರಿಸಲ್ಪಡುತ್ತಬಂದಿರುವ ಪಂಚ ದೇವರುಗಳ ದೊಡ್ಡ ಕಾರ್ತಿಕೋತ್ಸವ ಮತ್ತು ವನಭೋಜನ ಮಹೋತ್ಸವ ಈ ಬಾರಿ ನವೆಂಬರ್ 7ರ ಶುಕ್ರವಾರ (ಇಂದು), ಮತ್ತು 8...

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಆಗಿದ್ದು, ಇದೀಗ ಶನಿವಾರ ( ನವೆಂಬರ್ 8 ರಂದು ) ರಾತ್ರಿ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...

ಆಂಬ್ಯುಲೆನ್ಸ್ ಡಿಕ್ಕಿ : ಭಟ್ಕಳದ ದಂಪತಿ ಬೆಂಗಳೂರಿನಲ್ಲಿ ದುರಂತ ಸಾವು

ಭಟ್ಕಳ: ವೇಗವಾಗಿ ಬಂದ ಆಂಬ್ಯುಲೆನ್ಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಟ್ಕಳ ಮೂಲದ ದಂಪತಿ...

ಪಲ್ಟಿಯಾದ ಬಸ್: 45 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಅಂಕೋಲಾ: ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಒಂದಾಗಿರುವ ಗೋಕರ್ಣ ವಡ್ದೀಘಾಟ ಹೆದ್ದಾರಿ ತಿರುವಿನಲ್ಲಿ ಸಾರಿಗೆ ಸಂಸ್ಥೆಯ ಬಸ್ಸೊಂದು...

KDCC ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ವಸಂತ ನಾಯಕ ಜಮಗೋಡ : ಈ ಬಾರಿ ಹೆಚ್ಚಿದ ಗೆಲುವಿನ ನಿರೀಕ್ಷೆ

ಅಂಕೋಲಾ : ಸಹಕಾರಿ ಮತ್ತು ಸಾಮಾಜಿಕ, ಧಾರ್ಮಿಕ ಮತ್ತಿತರ ಕ್ಷೇತ್ರಗಳಲ್ಲಿ ಸದಾ ಮಂಚೂಣಿಯಲ್ಲಿರುವ ನಾಯಕ ಎಂದು...

ಅಂಕೋಲಾ ಕರಾವಳಿ ಉತ್ಸವ 2025 : ನವೆಂಬರ್ 5 ರಿಂದ 10ರ ವರೆಗೆ ಸಾಂಸ್ಕೃತಿಕ ವೈಭವ

ಅಂಕೋಲಾ: ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಂದಿರುವ ಅಂಕೋಲಾ ತಾಲೂಕಿನಲ್ಲಿ ಅಂಕೋಲಾ ಸಾಂಸ್ಕೃತಿಕ ಕಲಾಬಳಗ ಉತ್ತರ ಕನ್ನಡ ಸಂಘಟನೆಯ...

ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ ಬೃಹತ್ ಆಹಾರ ಮತ್ತು ಸ್ವದೇಶೀ ಮೇಳ: ಅಕ್ಟೋಬರ್ 7, 8,9 ರಂದು ಆಯೋಜನೆ

ಅಂಕೋಲಾ : ರಾಘವೇಂದ್ರ ಇವೆಂಟ್ಸ್ ಅಂಕೋಲಾ ಹಾಗೂ ಬೆನಕ ಇವೆಂಟ್ಸ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ...

ಸೇವಾಪರ್ವ ವಿಕಸಿತ ಭಾರತ ವಿಷಯಾಧಾರಿತ ಪೇಟಿಂಗ್ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದರ್ಶನ ನಾಯ್ಕ

ಭಟ್ಕಳ: ಕೇಂದ್ರ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ತಂಜಾವೂರು ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ವಿಕ್ಷಿತ್ ಭಾರತ್...