Important

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

Share

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಬಡಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಪಟ್ಟಣದ ಅರಣ್ಯ ಇಲಾಖೆ ಕಛೇರಿ ಹತ್ತಿರ ಸಾರ್ವಜನಿಕ ಗ್ರಂಥಾಲಯದ ಎದುರು ನಡೆದಿದೆ.

ತೊಡೂರು ನಿವಾಸಿ ಜ್ಯೋತಿ ವಿಷ್ಣುದಾಸ ನಾಯ್ಕ ಎನ್ನುವವರೇ ಗಾಯಗೊಂಡ ಮಹಿಳೆಯಾಗಿದ್ದು, ಇವರು ಅಂಕೋಲಾದ ಹೊನ್ನಿಕೇರಿಯಲ್ಲಿರುವ ತನ್ನ ಸಹೋದರಿಯ ಮನೆಗೆ ಬಂದು, ವಾಪಸ್ ಮನೆಗೆ ಹೊಗುವಾಗ ನೋಂದಣಿ ಸಂಖ್ಯೆಯ ಆಟೋರಿಕ್ಷಾ ಮೂಲಕ ಅಂಕೋಲಾ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ದಾರಿ ಮಧ್ಯೆ ಪಟ್ಟಣದ ಜೈಹಿಂದ್ ಹೈ ಸ್ಕೂಲ್ ಎದುರಿನ ರಸ್ತೆ ಬಳಿ ಈ ಅಪಘಾತ ಸಂಭವಿಸಿದೆ.

ಕಾನೂನು ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸೇರಿದಂತೆ ಬೆಂಗಳೂರಿನಿಂದ ಸುಮಾರು 14 ಪ್ರವಾಸಿಗರಿರುವ ಯುವಕರ ತಂಡ, ಬನಶಂಕರಿಯಿಂದ ಪ್ರವಾಸಿಗರ ಟೆಂಪೊ ಟ್ರಾವಲರ್ ವಾಹನದಲ್ಲಿ ಹೊರಟು, ಯಾಣ, ವಿಭೂತಿ ಪಾಲ್ಸ್ ಪ್ರವಾಸ ಮುಗಿಸಿ ಗೋಕರ್ಣಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು ಅಂಕೋಲಾ ಮಾರ್ಗವಾಗಿ ಗೋಕರ್ಣಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

ಗೂಗಲ್ ನಕ್ಷೆಯ ಸೂಚನೆ ನಂಬಿಯೋ ಏನೋ ಅವರು ಹತ್ತಿರದ ಹಿಲ್ಲೂರು ಮಾದನಗೇರಿ ಗೋಕರ್ಣ ರಸ್ತೆಯಲ್ಲಿ ಸಾಗುವ ಬದಲು,
ಅಂಕೋಲಾಕ್ಕೆ ಬಂದು ಮಂಜಗುಣಿ ಗಂಗಾವಳಿ ಸೇತುವೆ ಮಾರ್ಗವಾಗಿ ಗೋಕರ್ಣಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅಂಕೋಲಾ ಪಟ್ಟಣ ಮಾರ್ಗವಾಗಿ ಸಂಚರಿಸಬೇಕಾಗಿ ಬಂದಾಗ ದಾರಿಮಧ್ಯೆ ಈ ಅಪಘಾತ ಸಂಭವಿಸಿರಬಹುದು ಎನ್ನಲಾಗಿದೆ.

ಗಾಯಾಳುವನ್ನು ಸಾಗಿಸಲು ಸ್ಥಳೀಯರು ಸಹಕರಿಸಿದರು. ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದು, ಕಾನೂನು ಕ್ರಮ ಕೈಗೊಂಡಿದ್ದಾರೆ. ಅಪಘಾತದ ಘಟನೆ ಕುರಿತಂತೆ ಮತ್ತಷ್ಟು ಹೆಚ್ಚಿನ ಹಾಗೂ ಅಧಿಕೃತ ಮಾಹಿತಿ ತಿಳಿದು ಬರಬೇಕಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ ನಡೆದಿದೆ. ಮೈಸೂರಿನ ಟಿ.ಕೆ ಲೇಔಟ್ ತರಳಬಾಳು ಫ್ರೌಡಶಾಲಾ ವಿದ್ಯಾರ್ಥಿಗಳು ಜೋಗ್ ಫಾಲ್ಸ್ ಪ್ರವಾಸ ಮುಗಿಸಿ...

ತಗ್ಗು ಪ್ರದೇಶದಲ್ಲಿ ಪಲ್ಟಿಯಾದ ಸಾರಿಗೆ ಸಂಸ್ಥೆ ಬಸ್ : ಚಾಲಕ, ನಿರ್ವಾಹಕ , ಪುಟಾಣಿ ಮಗು ಸೇರಿ 26 ಕ್ಕೂ ಹೆಚ್ಚು ಜನರಿಗೆ ಗಾಯ – ನೋವು

ಅಂಕೋಲಾ: ಸಾರಿಗೆ ಸಂಸ್ಥೆಯ ಬಸ್ ಒಂದು ಪಲ್ಟಿಯಾಗಿ ಚಾಲಕ , ನಿರ್ವಾಹಕ, ಪುಟ್ಟ ಮಗು ಹಾಗೂ ಇತರೆ ಪ್ರಯಾಣಿಕರೂ ಸೇರಿ ಸುಮಾರು 26ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಸುಂಕಸಾಳ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...

ಆಂಬ್ಯುಲೆನ್ಸ್ ಡಿಕ್ಕಿ : ಭಟ್ಕಳದ ದಂಪತಿ ಬೆಂಗಳೂರಿನಲ್ಲಿ ದುರಂತ ಸಾವು

ಭಟ್ಕಳ: ವೇಗವಾಗಿ ಬಂದ ಆಂಬ್ಯುಲೆನ್ಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಟ್ಕಳ ಮೂಲದ ದಂಪತಿ...

ಪಲ್ಟಿಯಾದ ಬಸ್: 45 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಅಂಕೋಲಾ: ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಒಂದಾಗಿರುವ ಗೋಕರ್ಣ ವಡ್ದೀಘಾಟ ಹೆದ್ದಾರಿ ತಿರುವಿನಲ್ಲಿ ಸಾರಿಗೆ ಸಂಸ್ಥೆಯ ಬಸ್ಸೊಂದು...