Important

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

Share

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ ಟಿ.ವಿ ಹೆಸರನ್ನು ಕೆಲವರು ದುರ್ಬಳಕೆ ಮಾಡುತ್ತಿರುವ ಬಗ್ಗೆ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಇತ್ತೀಚೆಗೆ, “ವಿಸ್ಮಯ ಟಿ.ವಿ” ಹೆಸರನ್ನು ಹೇಳಿಕೊಂಡು ಜಾತ್ರೆಗಳಲ್ಲಿ ಎಲ್‌ಇಡಿ ಮೂಲಕ ಜಾಹೀರಾತು ಪ್ರದರ್ಶನ ಮಾಡುತ್ತೇವೆ ಎಂದು ಹೇಳಿ ಹಣ ಸಂಗ್ರಹಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿವೆ.

ಈ ಬಗ್ಗೆ ವಿಸ್ಮಯ ಟಿ.ವಿ ಸ್ಪಷ್ಟಪಡಿಸುವುದು ಏನೆಂದರೆ, ಜಾತ್ರೆಗಳಲ್ಲಿ ವಿಸ್ಮಯ ಟಿ.ವಿ ಯಾವುದೇ ಎಲ್‌ಇಡಿ ವ್ಯವಸ್ಥೆಯನ್ನು ಮಾಡುತ್ತಿಲ್ಲ.
ಹಾಗೆಯೇ, ಜಾತ್ರೆಯ ಎಲ್‌ಇಡಿ ಜಾಹೀರಾತುಗಳನ್ನು ನಾವು ತೆಗೆದುಕೊಳ್ಳುತ್ತಿಲ್ಲ.. ನಮ್ಮ ಯಾವುದೇ ವರದಿಗಾರರು ಅಥವಾ ಮಾರ್ಕೆಟಿಂಗ್ ಪ್ರತಿನಿಧಿಗಳು ಇಂತಹ ಜಾಹೀರಾತು ಸಂಗ್ರಹಣೆಯಲ್ಲಿ ತೊಡಗಿಸಿಕೊಂಡಿಲ್ಲ. ನಮ್ಮ ಟಿ.ವಿ ಚಾನಲ್‌ಗೆ ಮಾತ್ರ ನಾವು ಜಾಹೀರಾತು ತೆಗೆದುಕೊಳ್ಳುತ್ತಿದ್ದೇವೆ. ಅಲ್ಲದೆ, ಅವುಗಳನ್ನು ನಮ್ಮ ಅಧಿಕೃತ ಸೋಷಿಯಲ್ ಪೇಜ್‌ನಲ್ಲಿ ಪರಿಶೀಲಿಸಬಹುದು.

ಆದ್ದರಿಂದ, ವೀಕ್ಷಕರು ಹಾಗೂ ಜಾಹೀರಾತುದಾರರು ಎಚ್ಚರಿಕೆಯಿಂದ ಇರಬೇಕು. ಜಾತ್ರೆಯ ವೇಳೆ ಎಲ್‌ಇಡಿಗೆಂದು ವಿಸ್ಮಯ ಟಿ.ವಿ ಹೆಸರಿನಲ್ಲಿ ಜಾಹೀರಾತು ಕೇಳಿದರೆ, ದಯವಿಟ್ಟು ಪರಿಶೀಲಿಸಿ, ಮೋಸಕ್ಕೆ ಒಳಗಾಗಬೇಡಿ. ಯಾವುದೇ ಅನುಮಾನ ಅಥವಾ ಗೊಂದಲ ಇದ್ದಲ್ಲಿ, ತಕ್ಷಣ ನಮ್ಮನ್ನು ಸಂಪರ್ಕಿಸಿ: 9591537698 . ವಿಸ್ಮಯ ಟಿ.ವಿ ಹೆಸರನ್ನು ದುರುಪಯೋಗಪಡಿಸಿಕೊಂಡು ಜಾಹೀರಾತು ಕಲೆಕ್ಷನ್ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.ಇಂತಹ ದುರ್ಬಳಕೆ ತಪ್ಪಿಸಲು ಜಾಹೀರಾತುದಾರರು ವಿಸ್ಮಯ ಟಿ.ವಿಯ ಅಧಿಕೃತ ಬಿಲ್ ಪಡೆದು ಬ್ಯಾಂಕ್ ಅಕೌಂಟ್‌ಗೆ ನೇರವಾಗಿ ಅಥವಾ ನಮ್ಮ ಬಿಲ್ ನಲ್ಲಿರುವ QR ಕೋಡ್‌ಗೆ ಹಣವನ್ನು ಸಂದಾಯಮಾಡಬಹುದಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ ಹಿನ್ನಲೆ ಗೃಹೋಪಯೋಗಿ ವಸ್ತುಗಳ ಮೇಲೆ ಆಕರ್ಷಕ ರಿಯಾಯತಿ ನೀಡಲಾಗಿದೆ. ಆಫರ್ ಹಿನ್ನಲೆಯಲ್ಲಿ ಏ.ಸಿ...

ಅಂಕೋಲಾದಲ್ಲಿ ‘ಉತ್ತಾರಾ’ ಫಿಸಿಯೋಥೆರಪಿ–ನ್ಯೂಟ್ರಿಷನ್ ಕೇಂದ್ರ ಆರಂಭ

ಅಂಕೋಲಾ: ಪಟ್ಟಣದ ಶಾಂತಾದುರ್ಗಾ ದೇವಸ್ಥಾನದ ಎದುರಿನ ಮುಖ್ಯರಸ್ತೆ ಅಂಚಿನ ಕಟ್ಟಡದಲ್ಲಿ ‘ಉತ್ತಾರಾ ಫಿಸಿಯೋಥೆರಪಿ ಮತ್ತು ನ್ಯೂಟ್ರಿಷನ್ ಸೆಂಟರ್’ ಮಾ.7ರಂದು ಶುಭಾರಂಭಗೊಂಡಿದ್ದು, ಅಂಕೋಲಾ ಹಾಗೂ ಸುತ್ತಮುತ್ತಲಿನ ಜನರಿಗೆ ಆಧುನಿಕ ಆರೋಗ್ಯ ಸೇವೆ ಒದಗಿಸುವ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...

ನರ್ಸ್ ವೃತ್ತಿ ಮತ್ತು ಕುಟುಂಬ ಜವಾಬ್ದಾರಿಗಳ ನಡುವೆಯೇ ಸಾಧನೆ ಮಾಡಿದ ಪೂಜಾ ನಾಯ್ಕ

ಕುಮಟಾ :- ತಾಲೂಕಿನ ಕಲಭಾಗ ಗ್ರಾಮ ನಿವಾಸಿ ಪೂಜಾ ಸಂತೋಷ ನಾಯ್ಕ ಅವರು 2024–26ನೇ ಸಾಲಿನ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ...

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...