Big News

ಜಿಲ್ಲೆಯ ಆರೋಗ್ಯ ಸೇವೆಗೆ ಐತಿಹಾಸಿಕ ಹೆಜ್ಜೆ : ಶಾಸಕ ಸತೀಶ್ ಸೈಲ್

Share

ಅಂಕೋಲಾ : ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರವಾರದಲ್ಲಿ 100 ಕೋಟಿ ರೂಪಾಯಿ ವೆಚ್ಚದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿರುವುದು ಜಿಲ್ಲೆಯ ಜನತೆಗೆ ಮಹತ್ವದ ಕೊಡುಗೆಯ ಸಾಧನೆಯಾಗಿದೆ ಎಂದು ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಹೇಳಿದರು.

ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಜಿಲ್ಲೆಯ ಅಗತ್ಯತೆ ಕುರಿತು ಮನವರಿಕೆ

ತಾಲೂಕಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಜನರಿಗೆ ವಿಶೇಷ ಚಿಕಿತ್ಸಾ ಸೌಲಭ್ಯಗಳ ಕೊರತೆಯಿಂದ ಕಳೆದ ಹಲವು ದಶಕಗಳಿಂದಲೂ ಸಂಕಷ್ಟ ಎದುರಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಹಲವು ಬಾರಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಜಿಲ್ಲೆಯ ಅಗತ್ಯತೆ ಕುರಿತು ಮನವರಿಕೆ ಮಾಡಿಕೊಟ್ಟಿದ್ದಾಗಿ ತಿಳಿಸಿದರು. ಈ ಕುರಿತು ಈ ಹಿಂದೆ ಮಂಜುಗುಣಿ ಗಂಗಾವಳಿ ಸೇತುವೆ ಉದ್ಘಾಟನೆ ಬಳಿಕ ಜಿಲ್ಲಾ ಕೇಂದ್ರಕ್ಕೆ ಬಂದಿದ್ದ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಕಾರವಾರ ಕ್ರಿಮ್ಸ್ ಆಸ್ಪತ್ರೆಯಲ್ಲಿ ಅಧಿಕೃತ ಘೋಷಣೆ ಮಾಡಿ ಹೊಸ ಭರವಸೆ ಮೂಡಿಸಿದ್ದರು. ಅಂದು ನುಡಿದಂತೆ ಇಂದು ನಡೆದ ನಮ್ಮ ಸರ್ಕಾರ ಈ ದೀಗ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಹಸಿರು ನಿಶಾನೆ ತೋರಿರುವುದರಿಂದ ಜನರ ಬಹುಕಾಲದ ಕನಸು ನನಸಾಗುವ ಹಂತಕ್ಕೆ ಬಂದಿದೆ ಎಂದು ಹೆಮ್ಮೆ ಹಾಗು ಸಂತೋಷ ವ್ಯಕ್ತಪಡಿಸಿದರು.

ಕ್ಷೇತ್ರದ ಜನತೆಯ ಪರವಾಗಿ ಕೃತಜ್ಞತೆ

ಸಾಮಾನ್ಯ ಜನರ ಆರೋಗ್ಯ ಹಿತಾಸಕ್ತಿಯನ್ನು ಗಮನಿಸಿ ಯೋಜನೆಗೆ ಅನುಮೋದನೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ ಸಂಬಂಧಿತ ಇಲಾಖೆಗಳ ಸಚಿವರು, ಅಧಿಕಾರಿಗಳು ಹಾಗೂ ಜಿಲ್ಲೆಯ ಜನಪ್ರತಿನಿಧಿಗಳಿಗೆ ಕ್ಷೇತ್ರದ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

ಅಂಕೋಲಾ ತಾಲೂಕಿನ ಅಭಿವೃದ್ಧಿಗೆ ಪೂರಕವಾಗುವ ಹಲವು ಯೋಜನೆಗಳನ್ನು ಮುಂದಿರಿಸಲಾಗಿದೆ ಎಂದು ತಿಳಿಸಿದ ಶಾಸಕ ಸೈಲ್, ಗಂಗಾವಳಿ–ಗೋಕರ್ಣ ಸೇತುವೆ ನಿರ್ಮಾಣದ ಬಳಿಕ ಪ್ರವಾಸೋದ್ಯಮ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂದರು. ಅಲಗೇರಿಯ ವಿಮಾನ ನಿಲ್ದಾಣ ಯೋಜನೆ ತಾಲೂಕಿನ ಅಭಿವೃದ್ಧಿಗೆ ಹೊಸ ದಿಕ್ಕು ತೋರಲಿದೆ ಎಂದೂ ಹೇಳಿದರು.

ಶೇಡಿಕುಳಿ ಸಮೀಪ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಪ್ರಯತ್ನ

ಶೇಡಿಕುಳಿ ಸಮೀಪ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಪ್ರಯತ್ನ ನಡೆಯುತ್ತಿದ್ದು, ಜಿಲ್ಲೆಯ ಕ್ರೀಡಾಪಟುಗಳು ಹಾಗೂ ಯುವಕರ ಭವಿಷ್ಯಕ್ಕೆ ಪೂರಕವಾಗುವಂತಹ ಕ್ರೀಡಾಂಗಣ ನಿರ್ಮಾಣಕ್ಕೆ ಸ್ಥಳೀಯರು ಯುವಜನತೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಭಾವಿಕೇರಿ ಭಾಗದಲ್ಲಿ ಅಣುಸ್ಥಾವರ ನಿರ್ಮಾಣದಂತಹ ಯೋಜನೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಶಾಸಕ ಸೈಲ್ ಸ್ಪಷ್ಟಪಡಿಸಿದರು.

ಗಂಗಾವಳಿ ನದಿಯಲ್ಲಿ ಮಣ್ಣು ತೆರವಿಗೆ ಹೆಚ್ಚುವರಿ 2.34 ಕೋಟಿ ರೂ. ಬಿಡುಗಡೆ

ಮಳೆಗಾಲದ ಪ್ರವಾಹ ಭೀತಿ ನಿವಾರಣೆಗೆ ಸರ್ಕಾರದ ತ್ವರಿತ ಕ್ರಮ : ಕಳೆದ ಎರಡು ವರ್ಷಗಳ ಹಿಂದೆ ತಾಲೂಕಿನ ಶಿರೂರು ಸಮೀಪ ಸಂಭವಿಸಿದ್ದ ಗುಡ್ಡ ಕುಸಿತದಿಂದ ಗಂಗಾವಳಿ ನದಿಯಲ್ಲಿ ಅಪಾರ ಪ್ರಮಾಣದ ಮಣ್ಣು, ಕಲ್ಲುಬಂಡೆಗಳು ಜರಿದು ಬಿದ್ದು, ಅದರ ಅಡ್ಡ ಪರಿಣಾಮದ ಸಾಧ್ಯತೆಯಿಂದ ನದಿತೀರದ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿತ್ತು ಎಂದ ಶಾಸಕ ಸತೀಶ್ ಸೈಲ್,
ಮಳೆಗಾಲದ ಸಂದರ್ಭದಲ್ಲಿ ಕೃತಕ ಪ್ರವಾಹ ಉಂಟಾಗುವ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಹಲವು ಮನವಿಗಳು ಬಂದಿದ್ದವು. ಆರಂಭದಲ್ಲಿ ಮಣ್ಣು ತೆರವು ಕಾರ್ಯಕ್ಕೆ ಮಂಜೂರಾಗಿದ್ದ 2 ಕೋಟಿ ರೂಪಾಯಿ ಅನುದಾನದಲ್ಲಿ ಸಂಪೂರ್ಣ ಕಾಮಗಾರಿ ನಡೆಸುವುದು ಸಾಧ್ಯವಾಗದ ಹಿನ್ನಲೆ ಈ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದ ಬಳಿಕ ಕೇವಲ ಮೂರು ದಿನಗಳಲ್ಲೇ ಸರ್ಕಾರ ಹೆಚ್ಚುವರಿ 2.34 ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದು ಜನಪರ ಕಾಳಜಿಯ ಉದಾಹರಣೆಯಾಗಿದೆ ಎಂದರು.

ಕೆಲವೇ ದಿನಗಳಲ್ಲಿ ಮಣ್ಣು ತೆರವು ಕಾರ್ಯ

ಗಂಗಾವಳಿ ನದಿಯ ಮಣ್ಣು ತೆರವು ಕಾರ್ಯ ಕೆಲವೇ ದಿನಗಳಲ್ಲಿ ಆರಂಭವಾಗಲಿದ್ದು, ಇದರಿಂದ ನದಿತೀರದ ಜನರ ಆತಂಕ ನಿವಾರಣೆಯಾಗಲಿದೆ ಎಂದು ಶಾಸಕ ಸೈಲ್ ವಿಶ್ವಾಸ ವ್ಯಕ್ತಪಡಿಸಿದರು.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಮೂಲ ಸ್ಥಳದಲ್ಲೇ ಮುರಿನಕಟ್ಟೆ ನಿರ್ಮಾಣಕ್ಕೆ ಯೋಜನೆ ಸಿದ್ಧ : ವಿಶ್ವೇಶ್ವರ ಹೆಗಡೆ ಕಾಗೇರಿ

ಭಟ್ಕಳ: ಹೆದ್ದಾರಿ ಪ್ರಾಧಿಕಾರ ಮುರಿನಕಟ್ಟೆಯನ್ನು ಮೂಲ ಜಾಗದಲ್ಲಿಯೇ ಕಟ್ಟಲು ತಿರ್ಮಾನಿಸಿ ಈ ಕುರಿತು ನೀಲನಕ್ಷೇಯನ್ನು ತಯಾರಿಸಲಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಈ ವಿಚಾರದ ಕುರಿತಂತೆ ಜಿಲ್ಲಾಡಳಿತ ಹಾಗೂ...

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ ಸುರಕ್ಷಿತ ಆಶ್ರಯ ದೊರೆತಂತಿದ್ದು, ಕುಮಟಾ ಉಪವಿಭಾಗಾಧಿಕಾರಿಗಳ ಅನುಮತಿ ಬಳಿಕ ಹೋರಿಗಳನ್ನು ಗೋಶಾಲೆಗೆ ಕಳಿಸಿ, ಮೂಕ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ...

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ...

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ...

ಅಲಂಕಾರ ಜ್ಯುವೆಲ್ಲರ್ಸ್ : ಅಕ್ಷಯ ತೃತೀಯ ವಿಶೇಷ ಆಫರ್

ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ : ಈ ಶುಭ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನ ಮತ್ತು...

ಭಟ್ಕಳದಲ್ಲಿ 14 ಜಾನುವಾರಗಳ ರಕ್ಷಣೆ : ಇಬ್ಬರ ವಿರುದ್ಧ ಪ್ರಕರಣ ದಾಖಲು

ಭಟ್ಕಳ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರ ವಿರುದ್ಧ ಭಟ್ಕಳ ಪಟ್ಟಣ ಪೊಲೀಸ್...

ಮಹಾಶಿವರಾತ್ರಿ ಪುಣ್ಯಕಾಲದಲ್ಲಿ ಕಣಕಣೇಶ್ವರ ದೇವರ ನೂತನ ಭವ್ಯ ದೇವಸ್ಥಾನ ಲೋಕಾರ್ಪಣೆ :ಶಿಖರ ಕಲಶ ಪ್ರತಿಷ್ಠೆ – ಅಷ್ಟಬಂಧ ಸಮೇತ ನೂತನ ಶಿವಲಿಂಗ ಪ್ರತಿಷ್ಠಾ ಮಹೋತ್ಸವ

ಅಂಕೋಲಾ: ಪಟ್ಟಣದ ಕಾರವಾರ ರಸ್ತೆಯಲ್ಲಿರುವ ಪುರಾತನ ಪ್ರಸಿದ್ಧ ಶ್ರೀ ಕಣಕಣೇಶ್ವರ ದೇವಾಲಯವು ಮಹಾಶಿವರಾತ್ರಿ ಪುಣ್ಯಸಂದರ್ಭದಲ್ಲಿ ನೂತನ...