ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ ಶಕ್ತಿಗಳು ಇದನ್ನು ಬಳಸಿಕೊಂಡು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ನಡೆಸಿವೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ರೋಶ ವ್ಯಕ್ತಪಡಿಸಿದರು.
ಮತಾಂಧ ಶಕ್ತಿಗಳಿಂದ ಹಾನಿಗೊಂಡಿದೆ ಎನ್ನಲಾದ ಮುರಿನಕಟ್ಟೆ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಸಂದರ್ಭದಲ್ಲಿ ಶ್ರದ್ಧಾ ಕೇಂದ್ರಗಳನ್ನು ತೆರವುಗೊಳಿಸಿ ಸ್ಥಳಾಂತರಿಸುವುದು ಸಾಮಾನ್ಯ ಪ್ರಕ್ರಿಯೆಯಾಗಿದೆ. ಅದೇ ರೀತಿಯಲ್ಲಿ ಮುರಿನಕಟ್ಟೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಆಡಳಿತದ ಸಹಕಾರದೊಂದಿಗೆ ಸ್ಥಳ ಗುರುತಿಸಿ ಸ್ಥಳೀಯರ ನೆರವಿನಿಂದ ಭಾನುವಾರ ಬೆಳಿಗ್ಗೆ ಪುನರ್ ನಿರ್ಮಾಣ ಮಾಡಲಾಗಿತ್ತು ಎಂದು ಹೇಳಿದರು.
ಭಟ್ಕಳದ ಅಳ್ವೆಕೋಡಿ ಪಳ್ಳಿಹೊಳೆ ದುರಂತದ ದುಃಖದ ವಾತಾವರಣದ ನಡುವೆಯೇ ಸಾವಿರಾರು ಜನರು ಸೇರಿ ಪುನರ್ ನಿರ್ಮಾಣಗೊಂಡ ಕಟ್ಟೆಯನ್ನು ಹಾನಿಗೊಳಿಸಿರುವುದು ಹಾಗೂ ಪೊಲೀಸರ ಮೇಲೂ ಹಲ್ಲೆ ನಡೆಸಿರುವುದು ಸಮಾಜಘಾತಕ ಶಕ್ತಿಗಳ ಸಂಚಿನ ಭಾಗವಾಗಿರಬಹುದು ಎಂದು ಆರೋಪಿಸಿದರು. ಶಾಂತಿಯುತವಾಗಿದ್ದ ಭಟ್ಕಳದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಈ ಘಟನೆ ನಡೆದಿರಬಹುದು ಎಂದು ಅಭಿಪ್ರಾಯಪಟ್ಟರು.
ವಿಸ್ಮಯ ನ್ಯೂಸ್, ಈಶ್ವರ ನಾಯ್ಕ, ಭಟ್ಕಳ












