Big News

ಸ್ವಾತಂತ್ರ‍್ಯೋತ್ಸವದ ಸಂಭ್ರಮಕ್ಕೆ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಭರ್ಜರಿ ಆಫರ್; ಶೇ.70ರಷ್ಟು ರಿಯಾಯಿತಿ

Share

ಕುಮಟಾ: ಸ್ವಾತಂತ್ರ‍್ಯೋತ್ಸವದ ಅಂಗವಾಗಿ ತರಂಗ ಎಲೆಕ್ಟ್ರಾನಿಕ್ಸ್ ಆಂಡ್ ಫರ್ನಿಚರ್ ಗ್ರಾಹಕರಿಗಾಗಿ ವಿಶೇಷ ‘ಫ್ರೀಡಂ ಫೆಸ್ಟಿವಲ್’ ಆಫರ್ ಘೋಷಿಸಿದೆ. ಟಿವಿ, ರೆಫ್ರಿಜರೇಟರ್, ವಾಷಿಂಗ್ ಮೆಷಿನ್, ಏರ್‌ಕಂಡೀಷನರ್ ಸೇರಿದಂತೆ ವಿವಿಧ ಗೃಹೋಪಯೋಗಿ ವಸ್ತುಗಳ ಖರೀದಿಗೆ ಆಕರ್ಷಕ ರಿಯಾಯಿತಿ, ಕ್ಯಾಶ್‌ಬ್ಯಾಕ್ ಹಾಗೂ ಉಚಿತ ಉಡುಗೊರೆಗಳನ್ನು ನೀಡಲಾಗುತ್ತಿದೆ. ಈ ವಿಶೇಷ ಆಫರ್‌ನಲ್ಲಿ ಆಯ್ದ ಉತ್ಪನ್ನಗಳ ಮೇಲೆ ಶೂನ್ಯ ಡೌನ್ ಪೇಮೆಂಟ್, ಶೂನ್ಯ ಪ್ರೊಸೆಸಿಂಗ್ ಶುಲ್ಕ ಹಾಗೂ ಆಯ್ದ ಮಾದರಿಗಳಲ್ಲಿ ಬಡ್ಡಿ ರಹಿತ ಹಣಕಾಸು ಸೌಲಭ್ಯ ಕಲ್ಪಿಸಲಾಗಿದೆ. ಅಲ್ಲದೆ, 24 ತಿಂಗಳವರೆಗೆ ನೋ-ಕಾಸ್ಟ್ ಇಎಮ್‌ಐ ಸೌಲಭ್ಯವೂ ಲಭ್ಯವಿದ್ದು, ಇಎಮ್‌ಐ ಸೌಲಭ್ಯವು ತಿಂಗಳಿಗೆ Rs;994ರಿಂದಲೇ ಆರಂಭವಾಗಲಿದೆ.

ಗ್ರಾಹಕರಿಗೆ ಮತ್ತಷ್ಟು ಉಳಿತಾಯದ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಉತ್ಪನ್ನಗಳ ಮೇಲೆ ಕ್ಯಾಶ್‌ಬ್ಯಾಕ್ ಕೊಡುಗೆಗಳನ್ನೂ ನೀಡಲಾಗುತ್ತಿದೆ. ಎಸ್‌ಬಿಎಸ್ ರೆಫ್ರಿಜರೇಟರ್‌ಗಳ ಮೇಲೆ ಶೇ.15ರಷ್ಟು, ಗರಿಷ್ಠ 6,000 ವರೆಗೆ ಕ್ಯಾಶ್‌ಬ್ಯಾಕ್, ಫ್ರಂಟ್‌ಲೋಡ್ ವಾಷಿಂಗ್ ಮೆಷಿನ್‌ಗಳ ಮೇಲೆ 9,000ವರೆಗೆ ಹಾಗೂ ಆಯ್ದ ಎಲ್‌ಜಿ ಎಲೆಕ್ಟ್ರಾನಿಕ್ ಉತ್ಪನ್ನಗಳ ಮೇಲೆ 11,000ವರೆಗೆ ಕ್ಯಾಶ್‌ಬ್ಯಾಕ್ ಲಭ್ಯವಿದೆ.

ಇದರ ಜೊತೆಗೆ ಮನೆ ಬಳಕೆಯ ವಸ್ತುಗಳ ಖರೀದಿಗೆ ವಿಶೇಷ ಗಿಫ್ಟ್ ಕಾಂಬೋ ಆಫರ್‌ಗಳನ್ನೂ ಘೋಷಿಸಲಾಗಿದೆ. ಎಲ್‌ಇಡಿ ಟಿವಿ ಖರೀದಿಗೆ ಸೌಂಡ್‌ಬಾರ್, ವಾಷಿಂಗ್ ಮೆಷಿನ್‌ಗೆ ಟ್ರಾಲಿ ಬ್ಯಾಗ್, ಫ್ರಂಟ್‌ಲೋಡ್ ವಾಷಿಂಗ್ ಮೆಷಿನ್‌ಗೆ ಏರ್ ಫ್ರೈಯರ್ ಸೇರಿದಂತೆ ಹಲವು ಕಾಂಬೋ ಕೊಡುಗೆಗಳಿವೆ. 4 ಬರ್ನರ್ ಸ್ಟೌವ್ ಖರೀದಿಗೆ ಮಿಕ್ಸಿ ಅಥವಾ ಗೀಸರ್‌ನಂತಹ ಉಡುಗೊರೆಗಳನ್ನೂ ಆಯ್ದ ಆಫರ್‌ಗಳಲ್ಲಿ ನೀಡಲಾಗುತ್ತಿದೆ.

ಎಲ್‌ಜಿ, ಸ್ಯಾಮ್‌ಸಂಗ್, ಸೋನಿ ಟಿವಿಗಳ ಮೇಲೆ 3 ವರ್ಷದ ವಾರಂಟಿ ಸೌಲಭ್ಯವನ್ನೂ ಘೋಷಿಸಲಾಗಿದೆ. ಇದರ ಜೊತೆಗೆ ಕ್ಲಿಯರೆನ್ಸ್ ಮೆಗಾ ಸೇಲ್ ಮೂಲಕ ಆಯ್ದ ಉತ್ಪನ್ನಗಳ ಮೇಲೆ ಶೇ.70ರವರೆಗೆ ರಿಯಾಯಿತಿ ನೀಡಲಾಗುತ್ತಿದೆ.

ಈ ವಿಶೇಷ ಕೊಡುಗೆಗಳು ಆಗಸ್ಟ್ 16ರ ವರೆಗೆ ಲಭ್ಯವಿದ್ದು, ಸ್ಟಾಕ್ ಇರುವವರೆಗೆ ಹಾಗೂ ಅನ್ವಯವಾಗುವ ನಿಯಮ ಮತ್ತು ಷರತ್ತುಗಳಿಗೆ ಒಳಪಟ್ಟಿರುತ್ತವೆ. ‘ಮೊದಲು ಬಂದವರಿಗೆ ಮೊದಲು ಸೇವೆ’ ಆಧಾರದ ಮೇಲೆ ಸೀಮಿತ ಸಂಖ್ಯೆಯ ಉತ್ಪನ್ನಗಳು ಲಭ್ಯವಿರುವುದರಿಂದ ಗ್ರಾಹಕರು ಶೀಘ್ರದಲ್ಲೇ ಭೇಟಿ ನೀಡಿ ಕೊಡುಗೆಗಳ ಪ್ರಯೋಜನ ಪಡೆದುಕೊಳ್ಳುವಂತೆ ಕೋರಲಾಗಿದೆ. ತರಂಗ ಎಲೆಕ್ಟ್ರಾನಿಕ್ಸ್ ಆಂಡ್ ಫರ್ನಿಚರ್ ಶೋರೂಮ್. ಕುಮಟ, ಸಿರ್ಸಿ ಹಾಗೂ ಹೊನ್ನಾವರದ ಶಾಖೆಗಳಲ್ಲಿ ಈ ಆಫರ್ ಲಭ್ಯವಿದೆ.

ಕುಮಟ- 84948 91222, ಶಿರಸಿ- 84948 91444, ಹೊನ್ನಾವರ- 84948 91333. ಸೂಚನೆ: ವಿವಿಧ ಆಫರ್‌ಗಳು ಆಯ್ದ ಉತ್ಪನ್ನಗಳು ಮತ್ತು ಅನ್ವಯವಾಗುವ ನಿಯಮ ಹಾಗೂ ಷರತ್ತುಗಳಿಗೆ ಒಳಪಟ್ಟಿರುತ್ತವೆ.

ವಿಸ್ಮಯ ನ್ಯೂಸ್, ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ ಸಮ್ಮೇಳನವು ಇದೇ ಜೂನ್ 14 ರ ಭಾನುವಾರದಂದು ಕುಮಟಾದ ಲಕ್ಷ್ಮೀಬಾಯಿ ಬುರ್ಡೇಕರ್ ಸಭಾಂಗಣದಲ್ಲಿ ನಡೆಯಲಿದೆ....

ಪ್ರಸಿದ್ಧ ಕಣ್ಣಿನ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ: Job Alert

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಹೆಗಡೆ ಐ ಫೌಂಡೇಷನ್ / ಹೆಗಡೆ ಆಪ್ಟಿಕಲ್ಸ್, ಭಟ್ಕಳ ಹಾಗೂ ಹೊನ್ನಾವರದಲ್ಲಿ ಸುಸಜ್ಜಿತ ಆಸ್ಪತ್ರೆಗಳನ್ನು ಹೊಂದಿದ್ದು, ಇದೀಗ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ...

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ...

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ...

ಜಿಲ್ಲೆಯ ಆರೋಗ್ಯ ಸೇವೆಗೆ ಐತಿಹಾಸಿಕ ಹೆಜ್ಜೆ : ಶಾಸಕ ಸತೀಶ್ ಸೈಲ್

ಅಂಕೋಲಾ : ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರವಾರದಲ್ಲಿ 100 ಕೋಟಿ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ...

ಅಲಂಕಾರ ಜ್ಯುವೆಲ್ಲರ್ಸ್ : ಅಕ್ಷಯ ತೃತೀಯ ವಿಶೇಷ ಆಫರ್

ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ : ಈ ಶುಭ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನ ಮತ್ತು...

ಭಟ್ಕಳದಲ್ಲಿ 14 ಜಾನುವಾರಗಳ ರಕ್ಷಣೆ : ಇಬ್ಬರ ವಿರುದ್ಧ ಪ್ರಕರಣ ದಾಖಲು

ಭಟ್ಕಳ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರ ವಿರುದ್ಧ ಭಟ್ಕಳ ಪಟ್ಟಣ ಪೊಲೀಸ್...